Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...