Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...