Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...