Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...