Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...