Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...