Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...