Homeಕರ್ನಾಟಕಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’

- Advertisement -
- Advertisement -

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...