Homeಕರ್ನಾಟಕರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

ರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

- Advertisement -
- Advertisement -

ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ 2024-25ನೇ ಸಾಲಿನಿಂದ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಾರ ರಾಜ್ಯದಲ್ಲಿ ನಾಲ್ಕು ವರ್ಷಗಳ ಪದವಿ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಎನ್‌ಇಪಿ ಬದಲು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸಲು ಆಯೋಗವನ್ನು ರಚಿಸಲಾಗಿದೆ. ಈ ಆಯೋಗದ ಶಿಫಾರಸಿನಂತೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಆದೇಶಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಮುಖ್ಯಸ್ಥ ಪ್ರೊ.ಸುಖದೇವ್ ಥೋರಟ್ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು, ಡೀನ್‌ಗಳು, ಕಾಲೇಜುಗಳ ಪ್ರಾಂಶುಪಾಲರು ಮತ್ತು ಶಿಕ್ಷಣ ತಜ್ಞರ ಜೊತೆ ಮೂರು ತಿಂಗಳುಗಳ ಕಾಲ ನಿರಂತರ ಸಭೆ ನಡೆಸಿ, ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರ ಆಧಾರದ ಮೇಲೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ ಮೂರು ವರ್ಷಗಳ ಪದವಿ ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆಯಲು ಅವಕಾಶ : 

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಯಲ್ಲಿದೆ. ಈ ಅವಧಿಯಲ್ಲಿ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ಮೂರು ವರ್ಷಗಳ ಪದವಿ ಪೂರ್ಣಗೊಳಿಸಿದ ಬಳಿಕ ಇಚ್ಚಿಸಿದಲ್ಲಿ ನಾಲ್ಕನೇ ವರ್ಷದ ಆನರ್ಸ್‌ ಪದವಿಗೆ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳ ಬೇಡಿಕೆ, ಕಾಲೇಜುಗಳ ಮೂಲಸೌಕರ್ಯಗಳನ್ನು ಪರಿಗಣಿಸಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಶಿಕ್ಷಣ ಇಲಾಖೆ ಆದೇಶದಲ್ಲಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ಕೋರ್ಸ್ ಲಭ್ಯವಿಲ್ಲದಿದ್ದರೆ ಸಮೀಪದ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು ಆದೇಶಿಸಿದೆ.

2021-22ನೇ ಸಾಲಿನಿಂದ 2023-24ರವರೆಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆದರೆ, ಅವರು ಒಂದು ವರ್ಷದ ಏಕೀಕೃತ ಸ್ನಾತಕೋತ್ತರ ಪದವಿ ಮಾಡಬಹುದು. ಮೂರು ವರ್ಷದ ಪದವಿ ಮುಗಿಸಿ ನಿರ್ಗಮಿಸಲು ಬಯಸಿದರೆ, ಈ ಹಿಂದಿನಂತೆ ಪ್ರತ್ಯೇಕವಾಗಿ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು.

ಕಾಲೇಜು ಆರಂಭ ದಿನಾಂಕ ಸಮೀಪಿಸಿದರೂ ಪದವಿ ವಿಚಾರದಲ್ಲಿ ನಾಲ್ಕು ವರ್ಷವೋ ಮೂರು ವರ್ಷವೋ ಎಂಬ ಗೊಂದಲ ಇತ್ತು. ಇದನ್ನು ಶೀಘ್ರ ಪರಿಹರಿಸುವಂತೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದರು. ಹಾಗಾಗಿ, ಎಸ್‌ಇಪಿ ಆಯೋಗದ ಮಧ್ಯಂತರ ಶಿಫಾರಸು ಅನುಸರಿಸಿ ಶಿಕ್ಷಣ ಇಲಾಖೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಸೂಚಿಸಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ನಿರಾಳರಾಗಿದ್ದಾರೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...