Homeಕರ್ನಾಟಕರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

ರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

- Advertisement -
- Advertisement -

ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ 2024-25ನೇ ಸಾಲಿನಿಂದ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಾರ ರಾಜ್ಯದಲ್ಲಿ ನಾಲ್ಕು ವರ್ಷಗಳ ಪದವಿ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಎನ್‌ಇಪಿ ಬದಲು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸಲು ಆಯೋಗವನ್ನು ರಚಿಸಲಾಗಿದೆ. ಈ ಆಯೋಗದ ಶಿಫಾರಸಿನಂತೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಆದೇಶಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಮುಖ್ಯಸ್ಥ ಪ್ರೊ.ಸುಖದೇವ್ ಥೋರಟ್ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು, ಡೀನ್‌ಗಳು, ಕಾಲೇಜುಗಳ ಪ್ರಾಂಶುಪಾಲರು ಮತ್ತು ಶಿಕ್ಷಣ ತಜ್ಞರ ಜೊತೆ ಮೂರು ತಿಂಗಳುಗಳ ಕಾಲ ನಿರಂತರ ಸಭೆ ನಡೆಸಿ, ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರ ಆಧಾರದ ಮೇಲೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ ಮೂರು ವರ್ಷಗಳ ಪದವಿ ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆಯಲು ಅವಕಾಶ : 

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಯಲ್ಲಿದೆ. ಈ ಅವಧಿಯಲ್ಲಿ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ಮೂರು ವರ್ಷಗಳ ಪದವಿ ಪೂರ್ಣಗೊಳಿಸಿದ ಬಳಿಕ ಇಚ್ಚಿಸಿದಲ್ಲಿ ನಾಲ್ಕನೇ ವರ್ಷದ ಆನರ್ಸ್‌ ಪದವಿಗೆ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳ ಬೇಡಿಕೆ, ಕಾಲೇಜುಗಳ ಮೂಲಸೌಕರ್ಯಗಳನ್ನು ಪರಿಗಣಿಸಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಶಿಕ್ಷಣ ಇಲಾಖೆ ಆದೇಶದಲ್ಲಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ಕೋರ್ಸ್ ಲಭ್ಯವಿಲ್ಲದಿದ್ದರೆ ಸಮೀಪದ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು ಆದೇಶಿಸಿದೆ.

2021-22ನೇ ಸಾಲಿನಿಂದ 2023-24ರವರೆಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆದರೆ, ಅವರು ಒಂದು ವರ್ಷದ ಏಕೀಕೃತ ಸ್ನಾತಕೋತ್ತರ ಪದವಿ ಮಾಡಬಹುದು. ಮೂರು ವರ್ಷದ ಪದವಿ ಮುಗಿಸಿ ನಿರ್ಗಮಿಸಲು ಬಯಸಿದರೆ, ಈ ಹಿಂದಿನಂತೆ ಪ್ರತ್ಯೇಕವಾಗಿ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು.

ಕಾಲೇಜು ಆರಂಭ ದಿನಾಂಕ ಸಮೀಪಿಸಿದರೂ ಪದವಿ ವಿಚಾರದಲ್ಲಿ ನಾಲ್ಕು ವರ್ಷವೋ ಮೂರು ವರ್ಷವೋ ಎಂಬ ಗೊಂದಲ ಇತ್ತು. ಇದನ್ನು ಶೀಘ್ರ ಪರಿಹರಿಸುವಂತೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದರು. ಹಾಗಾಗಿ, ಎಸ್‌ಇಪಿ ಆಯೋಗದ ಮಧ್ಯಂತರ ಶಿಫಾರಸು ಅನುಸರಿಸಿ ಶಿಕ್ಷಣ ಇಲಾಖೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಸೂಚಿಸಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ನಿರಾಳರಾಗಿದ್ದಾರೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...