Homeಕರ್ನಾಟಕರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

ರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

- Advertisement -
- Advertisement -

ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ 2024-25ನೇ ಸಾಲಿನಿಂದ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಾರ ರಾಜ್ಯದಲ್ಲಿ ನಾಲ್ಕು ವರ್ಷಗಳ ಪದವಿ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಎನ್‌ಇಪಿ ಬದಲು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸಲು ಆಯೋಗವನ್ನು ರಚಿಸಲಾಗಿದೆ. ಈ ಆಯೋಗದ ಶಿಫಾರಸಿನಂತೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಆದೇಶಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಮುಖ್ಯಸ್ಥ ಪ್ರೊ.ಸುಖದೇವ್ ಥೋರಟ್ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು, ಡೀನ್‌ಗಳು, ಕಾಲೇಜುಗಳ ಪ್ರಾಂಶುಪಾಲರು ಮತ್ತು ಶಿಕ್ಷಣ ತಜ್ಞರ ಜೊತೆ ಮೂರು ತಿಂಗಳುಗಳ ಕಾಲ ನಿರಂತರ ಸಭೆ ನಡೆಸಿ, ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರ ಆಧಾರದ ಮೇಲೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ ಮೂರು ವರ್ಷಗಳ ಪದವಿ ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆಯಲು ಅವಕಾಶ : 

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಯಲ್ಲಿದೆ. ಈ ಅವಧಿಯಲ್ಲಿ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ಮೂರು ವರ್ಷಗಳ ಪದವಿ ಪೂರ್ಣಗೊಳಿಸಿದ ಬಳಿಕ ಇಚ್ಚಿಸಿದಲ್ಲಿ ನಾಲ್ಕನೇ ವರ್ಷದ ಆನರ್ಸ್‌ ಪದವಿಗೆ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳ ಬೇಡಿಕೆ, ಕಾಲೇಜುಗಳ ಮೂಲಸೌಕರ್ಯಗಳನ್ನು ಪರಿಗಣಿಸಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಶಿಕ್ಷಣ ಇಲಾಖೆ ಆದೇಶದಲ್ಲಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ಕೋರ್ಸ್ ಲಭ್ಯವಿಲ್ಲದಿದ್ದರೆ ಸಮೀಪದ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು ಆದೇಶಿಸಿದೆ.

2021-22ನೇ ಸಾಲಿನಿಂದ 2023-24ರವರೆಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆದರೆ, ಅವರು ಒಂದು ವರ್ಷದ ಏಕೀಕೃತ ಸ್ನಾತಕೋತ್ತರ ಪದವಿ ಮಾಡಬಹುದು. ಮೂರು ವರ್ಷದ ಪದವಿ ಮುಗಿಸಿ ನಿರ್ಗಮಿಸಲು ಬಯಸಿದರೆ, ಈ ಹಿಂದಿನಂತೆ ಪ್ರತ್ಯೇಕವಾಗಿ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು.

ಕಾಲೇಜು ಆರಂಭ ದಿನಾಂಕ ಸಮೀಪಿಸಿದರೂ ಪದವಿ ವಿಚಾರದಲ್ಲಿ ನಾಲ್ಕು ವರ್ಷವೋ ಮೂರು ವರ್ಷವೋ ಎಂಬ ಗೊಂದಲ ಇತ್ತು. ಇದನ್ನು ಶೀಘ್ರ ಪರಿಹರಿಸುವಂತೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದರು. ಹಾಗಾಗಿ, ಎಸ್‌ಇಪಿ ಆಯೋಗದ ಮಧ್ಯಂತರ ಶಿಫಾರಸು ಅನುಸರಿಸಿ ಶಿಕ್ಷಣ ಇಲಾಖೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಸೂಚಿಸಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ನಿರಾಳರಾಗಿದ್ದಾರೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...