Homeಕರ್ನಾಟಕಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ಬ್ರಿಟೀಷರ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ರಾಣಿ ಅಬ್ಬಕ್ಕ ಸೇರಿದಂತೆ ಕನ್ನಡದ ರಾಜಮನೆತನಗಳಾದ ಶಾತವಾಹನರು, ಕದಂಬರು ಮತ್ತು ಗಂಗರ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ವಾಸ್ತುಶಿಲ್ಪ, ರಜಪೂತರ ಕೊಡುಗೆಗಳು, ಕ್ರಿಸ್ತನ ಜೀವನ, ಧರ್ಮಬೋಧನೆ ಮುಂತಾದ ಅಧ್ಯಾಯಗಳನ್ನು ಸಹ ಕೈಬಿಡಲಾಗಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಶಾಲಾ ಅವಧಿ ಕಡಿತಗೊಂಡಿರುವ ನೆಪ ಇಟ್ಟುಕೊಂಡು ಟಿಪ್ಪು ಸುಲ್ತಾನ್ ಸೇರಿದಂತೆ ಹಲವು ಮಹತ್ವದ ಪಠ್ಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಡಿಎಸ್‌ಇಆರ್‌ಟಿ ತನ್ನ ವೆಬ್‌ ಸೈಟ್‌ನಲ್ಲಿ ಕೈಬಿಡಲಾದ ಪಠ್ಯಗಳನ್ನು ಉಲ್ಲೇಖಿಸಿದೆ. ಏಳನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿದ್ದ ಮೈಸೂರು ಸಾಮ್ರಾಜ್ಯದ ಐತಿಹಾಸಿಕ ಚರಿತ್ರೆಯ ಭಾಗದಿಂದ ಟಿಪ್ಪು ಸುಲ್ತಾನ್ ಆಧ್ಯಾಯವನ್ನು ಕಿತ್ತು ಹಾಕಲಾಗಿದೆ.

ಆರನೇ ತರಗತಿ ಮತ್ತು 10ನೇ ತರಗತಿ ಪಠ್ಯಗಳಲ್ಲಿ ಟಿಪ್ಪು ಸುಲ್ತಾನ್ ಕುರಿತ ಪಠ್ಯಗಳನ್ನು ಉಳಿಸಿಕೊಂಡಿದ್ದೇವೆ. ಹಾಗಾಗಿ ಪುನಾರಾವರ್ತನೆ ಆಗಬಾರದೆಂದು 7ನೇ ತರಗತಿಯ ಪಠ್ಯದಿಂದ ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಬ್ರಿಟೀಷರ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ರಾಣಿ ಅಬ್ಬಕ್ಕ ಸೇರಿದಂತೆ ಕನ್ನಡದ ರಾಜಮನೆತನಗಳಾದ ಶಾತವಾಹನರು, ಕದಂಬರು ಮತ್ತು ಗಂಗರ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ವಾಸ್ತುಶಿಲ್ಪ, ರಜಪೂತರ ಕೊಡುಗೆಗಳು, ಕ್ರಿಸ್ತನ ಜೀವನ, ಧರ್ಮಬೋಧನೆ ಮುಂತಾದ ಅಧ್ಯಾಯಗಳನ್ನು ಸಹ ಕೈಬಿಡಲಾಗಿದೆ.

ಯೇಸುಕ್ರಿಸ್ತ ಮತ್ತು ಪ್ರವಾದಿ ಮಹಮ್ಮದ್ ಅವರ ಬೋಧನೆಗಳ ಸಂಪೂರ್ಣ ಅಧ್ಯಾಯವನ್ನು ಆರನೇ ತರಗತಿಯಿಂದ ಕೈಬಿಡಲಾಗಿದೆ. ಆದರೆ ವಿದ್ಯಾರ್ಥಿಗಳು ಈ ಧಾರ್ಮಿಕ ವ್ಯಕ್ತಿಗಳು ಮತ್ತು ಅವರ ಬೋಧನೆಗಳನ್ನು ಒಂಬತ್ತನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಾರೆ. ಬೌದ್ಧಧರ್ಮ ಮತ್ತು ಜೈನ ಧರ್ಮವನ್ನು ಕಲಿಸಲು ನಿಗದಿಪಡಿಸಿದ ಸಮಯವನ್ನು ಸಹ ಶೇಕಡಾ 50 ರಷ್ಟು ಕಡಿಮೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

2020-21ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯನ್ನು ಅಂದಾಜು ಮಾಡಿ, ಪಠ್ಯಕ್ರಮಗಳನ್ನು ಪರಿಷ್ಕರಣೆ ಅಥವಾ ಮೊಟಕು ಮಾಡಲಾಗಿದೆ. ಸೆಪ್ಟೆಂಬರ್ 1 ರಿಂದ 120 ದಿನಗಳಲ್ಲಿಅಗತ್ಯವಾದ ಪಠ್ಯಗಳನ್ನು ಮಾತ್ರ ಕಲಿಸಲು 6 ರಿಂದ 10 ನೇ ತರಗತಿಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ಒಂದು ಕೈಪಿಡಿ ನೀಡಲಾಗಿದೆ.

ಇನ್ನೊಂದೆಡೆ ಸಿಬಿಎಸ್‌ಇ ಪೌರತ್ವ, ಜಾತ್ಯಾತೀತತೆ, ಒಕ್ಕೂಟ ಸರ್ಕಾರಕ್ಕೆ ಸಂಬಂಧಿಸಿದ ಪಠ್ಯಗಳನ್ನು ಕೈಬಿಡುವುದಾಗಿ ಕಳೆದ ತಿಂಗಳು ತಿಳಿಸಿತ್ತು. ಉತ್ತರ ಪ್ರದೇಶ ಸರ್ಕಾರವು ನೆಹರೂ ಮತ್ತು ಲಾಲ್‌ ಬಹದ್ದೂರ್ ಶಾಸ್ತ್ರಿಯವರಿಗೆ ಸಂಬಂಧಿಸಿದ ಪಠ್ಯಗಳನ್ನು ಕೈಬಿಟ್ಟಿದೆ ಎಂದು ಅಲ್ಲಿನ ಕಾಂಗ್ರೆಸ್ ಪಕ್ಷ ಆರೋಪಿಸಿದೆ.


ಇದನ್ನೂ ಓದಿ; ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...