Homeಕರ್ನಾಟಕಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆಗೆ ನೇಮಿಸಿದ್ದ ಸಮಿತಿಯು ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಪಠ್ಯಪುಸ್ತಕದಲ್ಲಿ ಕಂಡು ಬಂದಿರುವ ಸಾಲು ಸಾಲು ದೋಷಗಳ ಪೈಕಿ ಎಂಟನ್ನು ಮಾತ್ರ ತಿದ್ದಲು ಮುಂದಾಗಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದು, ಪಠ್ಯದಲ್ಲಿನ ಎಂಟು ತಪ್ಪುಗಳನ್ನು ಉಲ್ಲೇಖಿಸಿ ತಿದ್ದುಪಡಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ತಿದ್ದುಪಡಿಯಲ್ಲಿ ಏನೇನು ಸೇರಿಸಲಾಗುತ್ತಿದೆ?

1) 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ‘ನಮ್ಮ ಸಂವಿಧಾನ’ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಪರಿಷ್ಕೃತ ಪಠ್ಯದಲ್ಲಿ, “ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ವಾಕ್ಯವು ಇಲ್ಲವಾಗಿದ್ದು, “ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ.

2) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ‘ಭಕ್ತಿ ಪಂಥ ಹಾಗೂ ಸೂಫಿಸಂತರು’ ಸಂಪೂರ್ಣ ಪಾಠ ಸೇರ್ಪಡೆ.

3) 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಹೆಸರು ಡಾ.ಆರ್.ಎನ್‌.ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ.

4) 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.

5) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ.

6) 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಸೇರ್ಪಡೆ.

7) 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ ‘ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು’ ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್ ರವರ ಭಾವಚಿತ್ರಗಳನ್ನು ಅಳವಡಿಸುವುದು.

8) 4ನೇ ತರಗತಿಯ ಪರಿಸರ ಅಧ್ಯಯನ ‘ಪ್ರತಿಯೊಬ್ಬರು ವಿಶಿಷ್ಟ’ ಎಂಬ ಪಾಠದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ರವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು” ಎಂಬ ವಾಕ್ಯದ ನಂತರ “ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು” ಎಂಬ ಸಾಲನ್ನು ಕೈಬಿಡುವುದು.

(ಮುಂದಿನ ಅಂಶಗಳು ಪಠ್ಯ ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳನ್ನು ಸೂಚಿಸುತ್ತವೆ.)

9) ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ, ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ.

10) ಅಗತ್ಯವಿರುವ ತಿದ್ದೋಲೆ ಪ್ರತಿಗಳನ್ನು ಮುದ್ರಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ಪಡೆದಿರುವ ಎಲ್-೧ ದರ ನಮೂದಿಸಿರುವ ಮುದ್ರಕರಿಂದ ಮುದ್ರಿಸಿ, ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸಿ, ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಹಾಗೂ ಅನುದಾನರಹಿತ ಶಾಲೆಗಳಿಗೆ ಉಚಿತವಾಗಿ ತಲಾ ಒಂದು ಪ್ರತಿಯಂತೆ ವಿತರಿಸುವುದು.

11)ತಿದ್ದೋಲೆಯ ವಿಷಯಾಂಶಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಜಾಲತಾಣದಲ್ಲಿ ಪ್ರಕಟಿಸುವುದು ಮತ್ತು ಮೂಲ ಪಠ್ಯಪುಸ್ತಕಗಳ ಸಾಫ್ಟ್ ಪ್ರತಿಯಲ್ಲಿ ಅಳವಡಿಸುವುದು.

‘ಪಠ್ಯಪುಸ್ತಕ ವಾಪಸ್ ಪಡೆಯುವುದೇ ಸರಿಯಾದ ಕ್ರಮ’

ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪುಗಳ ಸಂಬಂಧ 62 ಪುಟಗಳ ಸಂಶೋಧನಾ ವರದಿ ಸಿದ್ಧಪಡಿಸಿರುವ ಸಂಶೋಧಕ, ಸಾಮಾಜಿಕ ಕಾರ್ಯರ್ತ ಹರ್ಷಕುಮಾರ್‌ ಕುಗ್ವೆಯವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಂಪೂರ್ಣ ಪಠ್ಯಪುಸ್ತಕವನ್ನು ವಾಪಸ್‌ ಪಡೆದು ಹಳೆಯ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ನೀಡುವುದು ಸರಿಯಾದ ಕ್ರಮ” ಎಂದು ಪ್ರತಿಪಾದಿಸಿದರು.

“ಇಷ್ಟು ದಿನ ಶಿಕ್ಷಣ ಸಚಿವರು ತಾವು ಮಾಡಿದ್ದೆಲ್ಲ ಸರಿ ಇದೆ ಎಂದು ಮಾತನಾಡುತ್ತಿದ್ದರು. ಆದರೆ ತಪ್ಪುಗಳಿರುವುದನ್ನು ಸರ್ಕಾರ ತನ್ನ ಆದೇಶದಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿದೆ. ದುರಾದೃಷ್ಟವಶಾತ್‌ ಸರ್ಕಾರ ಕೇವಲ ಎಂಟು ಅಂಶಗಳನ್ನು ಮಾತ್ರ ಪ್ರಸ್ತಾಪಿಸಿ ನಿಜವಾದ ಸಮಸ್ಯೆಯನ್ನು ಮರೆಮಾಚಿದೆ. ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಿದು. ನೂರಾರು ಗಂಭೀರ ಲೋಪಗಳನ್ನು ಗುರುತಿಸಿ ವರದಿ ಸಿದ್ಧಪಡಿಸಿದ್ದೇವೆ. ಪ್ರತಿ ಪಠ್ಯಪುಸ್ತಕದಲ್ಲೂ ಈ ತಪ್ಪುಗಳನ್ನು ಕಾಣಬಹುದು. ಅದ್ಯಾವುದರ ಬಗ್ಗೆಯೂ ಮಾತನಾಡದೆ ಕೇವಲ ಒಂದೆರಡು ತಪ್ಪುಗಳನ್ನು ಪ್ರಸ್ತಾಪಿಸಿ ಜನರನ್ನು ಯಾಮಾರಿಸಲಾಗುತ್ತಿದೆ. ತಮ್ಮ ಅಜೆಂಡಾವನ್ನೇ ಮುಂದುವರಿಸಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಷ್ಕರಣೆಗೆ ಸರ್ಕಾರ ಆದೇಶ ಮಾಡಿರಲಿಲ್ಲ ಎಂಬುದು ಇಂದಿನ ಆದೇಶದಲ್ಲಿ ಸ್ಪಷ್ಟವಾಗಿದೆ. ಇದು ಪರಿಶೀಲನೆಗೆ ನೇಮಿಸಿದ್ದ ಸಮಿತಿಯಾಗಿತ್ತೇ ಹೊರತು ಪರಿಷ್ಕರಣೆಗಲ್ಲ ಎಂಬುದನ್ನು ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ. ಸರ್ಕಾರದ ಆದೇಶವಿಲ್ಲದೆ ಪರಿಷ್ಕರಣೆ ಮಾಡಿರುವುದು ಅಸಿಂಧುವಾಗುತ್ತದೆ. ಸಂಪೂರ್ಣವಾಗಿ ಪರಿಷ್ಕರಣೆಯನ್ನು ಕೈಬಿಟ್ಟು, ಈ ನಷ್ಟಕ್ಕೆ ಕಾರಣವಾದವರಿಂದಲೇ ಹಣ ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಪ್ರತಿಕ್ರಿಯೆ ನೀಡಿ, “ಸರ್ಕಾರದ ನಿರ್ಧಾರವನ್ನು ಒಪ್ಪಲು ಸಾಧ್ಯವೇ ಇಲ್ಲ. ಅಲ್ಲಿ ಇಲ್ಲಿ ಒಂಚೂರು ಬದಲಾಯಿಸುವ ಕೆಲಸ ಇದಲ್ಲ. ಇಡೀ ಪ್ರಕ್ರಿಯೆಯೇ ಅಸಾಂವಿಧಾನಿಕ, ಅಪ್ರಜಾಸತ್ತಾತ್ಮಕ ಆಗಿರುವುದರಿಂದ ಇಲ್ಲೊಂದು ಇಲ್ಲೊಂದು ವಾಕ್ಯ ಬದಲಿಸುತ್ತೇವೆ ಎನ್ನುವುದರಲ್ಲಿ ಅರ್ಥವೇ ಇಲ್ಲ. ಇಡೀ ಪ್ರಕ್ರಿಯೆಯನ್ನೇ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಪಠ್ಯಪುಸ್ತಕ ಎಡವಟ್ಟಿಗೆ ಸಂಬಂಧಿಸಿದ ಕೆಲವು ವರದಿಗಳು (ಲಿಂಕ್ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...