Homeಕರ್ನಾಟಕಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆಗೆ ನೇಮಿಸಿದ್ದ ಸಮಿತಿಯು ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಪಠ್ಯಪುಸ್ತಕದಲ್ಲಿ ಕಂಡು ಬಂದಿರುವ ಸಾಲು ಸಾಲು ದೋಷಗಳ ಪೈಕಿ ಎಂಟನ್ನು ಮಾತ್ರ ತಿದ್ದಲು ಮುಂದಾಗಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದು, ಪಠ್ಯದಲ್ಲಿನ ಎಂಟು ತಪ್ಪುಗಳನ್ನು ಉಲ್ಲೇಖಿಸಿ ತಿದ್ದುಪಡಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ತಿದ್ದುಪಡಿಯಲ್ಲಿ ಏನೇನು ಸೇರಿಸಲಾಗುತ್ತಿದೆ?

1) 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ‘ನಮ್ಮ ಸಂವಿಧಾನ’ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಪರಿಷ್ಕೃತ ಪಠ್ಯದಲ್ಲಿ, “ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ವಾಕ್ಯವು ಇಲ್ಲವಾಗಿದ್ದು, “ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ.

2) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ‘ಭಕ್ತಿ ಪಂಥ ಹಾಗೂ ಸೂಫಿಸಂತರು’ ಸಂಪೂರ್ಣ ಪಾಠ ಸೇರ್ಪಡೆ.

3) 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಹೆಸರು ಡಾ.ಆರ್.ಎನ್‌.ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ.

4) 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.

5) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ.

6) 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಸೇರ್ಪಡೆ.

7) 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ ‘ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು’ ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್ ರವರ ಭಾವಚಿತ್ರಗಳನ್ನು ಅಳವಡಿಸುವುದು.

8) 4ನೇ ತರಗತಿಯ ಪರಿಸರ ಅಧ್ಯಯನ ‘ಪ್ರತಿಯೊಬ್ಬರು ವಿಶಿಷ್ಟ’ ಎಂಬ ಪಾಠದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ರವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು” ಎಂಬ ವಾಕ್ಯದ ನಂತರ “ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು” ಎಂಬ ಸಾಲನ್ನು ಕೈಬಿಡುವುದು.

(ಮುಂದಿನ ಅಂಶಗಳು ಪಠ್ಯ ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳನ್ನು ಸೂಚಿಸುತ್ತವೆ.)

9) ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ, ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ.

10) ಅಗತ್ಯವಿರುವ ತಿದ್ದೋಲೆ ಪ್ರತಿಗಳನ್ನು ಮುದ್ರಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ಪಡೆದಿರುವ ಎಲ್-೧ ದರ ನಮೂದಿಸಿರುವ ಮುದ್ರಕರಿಂದ ಮುದ್ರಿಸಿ, ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸಿ, ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಹಾಗೂ ಅನುದಾನರಹಿತ ಶಾಲೆಗಳಿಗೆ ಉಚಿತವಾಗಿ ತಲಾ ಒಂದು ಪ್ರತಿಯಂತೆ ವಿತರಿಸುವುದು.

11)ತಿದ್ದೋಲೆಯ ವಿಷಯಾಂಶಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಜಾಲತಾಣದಲ್ಲಿ ಪ್ರಕಟಿಸುವುದು ಮತ್ತು ಮೂಲ ಪಠ್ಯಪುಸ್ತಕಗಳ ಸಾಫ್ಟ್ ಪ್ರತಿಯಲ್ಲಿ ಅಳವಡಿಸುವುದು.

‘ಪಠ್ಯಪುಸ್ತಕ ವಾಪಸ್ ಪಡೆಯುವುದೇ ಸರಿಯಾದ ಕ್ರಮ’

ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪುಗಳ ಸಂಬಂಧ 62 ಪುಟಗಳ ಸಂಶೋಧನಾ ವರದಿ ಸಿದ್ಧಪಡಿಸಿರುವ ಸಂಶೋಧಕ, ಸಾಮಾಜಿಕ ಕಾರ್ಯರ್ತ ಹರ್ಷಕುಮಾರ್‌ ಕುಗ್ವೆಯವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಂಪೂರ್ಣ ಪಠ್ಯಪುಸ್ತಕವನ್ನು ವಾಪಸ್‌ ಪಡೆದು ಹಳೆಯ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ನೀಡುವುದು ಸರಿಯಾದ ಕ್ರಮ” ಎಂದು ಪ್ರತಿಪಾದಿಸಿದರು.

“ಇಷ್ಟು ದಿನ ಶಿಕ್ಷಣ ಸಚಿವರು ತಾವು ಮಾಡಿದ್ದೆಲ್ಲ ಸರಿ ಇದೆ ಎಂದು ಮಾತನಾಡುತ್ತಿದ್ದರು. ಆದರೆ ತಪ್ಪುಗಳಿರುವುದನ್ನು ಸರ್ಕಾರ ತನ್ನ ಆದೇಶದಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿದೆ. ದುರಾದೃಷ್ಟವಶಾತ್‌ ಸರ್ಕಾರ ಕೇವಲ ಎಂಟು ಅಂಶಗಳನ್ನು ಮಾತ್ರ ಪ್ರಸ್ತಾಪಿಸಿ ನಿಜವಾದ ಸಮಸ್ಯೆಯನ್ನು ಮರೆಮಾಚಿದೆ. ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಿದು. ನೂರಾರು ಗಂಭೀರ ಲೋಪಗಳನ್ನು ಗುರುತಿಸಿ ವರದಿ ಸಿದ್ಧಪಡಿಸಿದ್ದೇವೆ. ಪ್ರತಿ ಪಠ್ಯಪುಸ್ತಕದಲ್ಲೂ ಈ ತಪ್ಪುಗಳನ್ನು ಕಾಣಬಹುದು. ಅದ್ಯಾವುದರ ಬಗ್ಗೆಯೂ ಮಾತನಾಡದೆ ಕೇವಲ ಒಂದೆರಡು ತಪ್ಪುಗಳನ್ನು ಪ್ರಸ್ತಾಪಿಸಿ ಜನರನ್ನು ಯಾಮಾರಿಸಲಾಗುತ್ತಿದೆ. ತಮ್ಮ ಅಜೆಂಡಾವನ್ನೇ ಮುಂದುವರಿಸಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಷ್ಕರಣೆಗೆ ಸರ್ಕಾರ ಆದೇಶ ಮಾಡಿರಲಿಲ್ಲ ಎಂಬುದು ಇಂದಿನ ಆದೇಶದಲ್ಲಿ ಸ್ಪಷ್ಟವಾಗಿದೆ. ಇದು ಪರಿಶೀಲನೆಗೆ ನೇಮಿಸಿದ್ದ ಸಮಿತಿಯಾಗಿತ್ತೇ ಹೊರತು ಪರಿಷ್ಕರಣೆಗಲ್ಲ ಎಂಬುದನ್ನು ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ. ಸರ್ಕಾರದ ಆದೇಶವಿಲ್ಲದೆ ಪರಿಷ್ಕರಣೆ ಮಾಡಿರುವುದು ಅಸಿಂಧುವಾಗುತ್ತದೆ. ಸಂಪೂರ್ಣವಾಗಿ ಪರಿಷ್ಕರಣೆಯನ್ನು ಕೈಬಿಟ್ಟು, ಈ ನಷ್ಟಕ್ಕೆ ಕಾರಣವಾದವರಿಂದಲೇ ಹಣ ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಪ್ರತಿಕ್ರಿಯೆ ನೀಡಿ, “ಸರ್ಕಾರದ ನಿರ್ಧಾರವನ್ನು ಒಪ್ಪಲು ಸಾಧ್ಯವೇ ಇಲ್ಲ. ಅಲ್ಲಿ ಇಲ್ಲಿ ಒಂಚೂರು ಬದಲಾಯಿಸುವ ಕೆಲಸ ಇದಲ್ಲ. ಇಡೀ ಪ್ರಕ್ರಿಯೆಯೇ ಅಸಾಂವಿಧಾನಿಕ, ಅಪ್ರಜಾಸತ್ತಾತ್ಮಕ ಆಗಿರುವುದರಿಂದ ಇಲ್ಲೊಂದು ಇಲ್ಲೊಂದು ವಾಕ್ಯ ಬದಲಿಸುತ್ತೇವೆ ಎನ್ನುವುದರಲ್ಲಿ ಅರ್ಥವೇ ಇಲ್ಲ. ಇಡೀ ಪ್ರಕ್ರಿಯೆಯನ್ನೇ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಪಠ್ಯಪುಸ್ತಕ ಎಡವಟ್ಟಿಗೆ ಸಂಬಂಧಿಸಿದ ಕೆಲವು ವರದಿಗಳು (ಲಿಂಕ್ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...