Homeಕರ್ನಾಟಕ‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

- Advertisement -
- Advertisement -

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು. 

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ ಉದಾಸೀನ ತೋರುತ್ತಿದೆ. ಪಕ್ಕದ ರಾಜ್ಯಗಳಾದ ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳು ಒಳ ಮೀಸಲಾತಿಯನ್ನು ಜಾರಿ ಮಾಡುವ ಧೃಡ ತೀರ್ಮಾನವನ್ನು ಕೈಗೊಂಡಿದ್ದರು. ಕರ್ನಾಟಕ ಸರ್ಕಾರ ಮಾತ್ರ ಸಾಮಾಜಿಕ ನ್ಯಾಯದ ನಿರಾಕರಣೆ ಮಾಡುತ್ತಿದೆ. 

ಈಗ 27ನೇ ತಾರೀಖು ಒಳಮೀಸಲಾತಿ ಕುರಿತು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಆದರೆ ಒಂದು ದಿನ ಮುಂಚಿತವಾಗಿ ಸರ್ಕಾರ ಉಪಚುನಾವಣೆ ಎಂಬ ಕುಂಟುನೆಪವನ್ನು ಮುಂದಿಟ್ಟುಕೊಂಡು 27ನೇ ತಾರೀಖು (ಇಂದು) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಒಳಮೀಸಲಾತಿ ಹೋರಾಟಗಾರರ ಅಭಿಪ್ರಾಯಗಳನ್ನು ಪಡೆಯದೇ ಅನಿರ್ಧಿಷ್ಟಾವಧಿಗೆ ಮುಂದೂಡಿ ಒಳಮೀಸಲಾತಿಗೆ ಬಹುದೊಡ್ಡ ದ್ರೋಹ ಎಸಗಿದ್ದಾರೆ ಎಂದು ಸಮಗ್ರ ಒಳಮೀಸಲಾತಿ ಹೋರಾಟಗಾರರು ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. 

ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಘೋಷಣೆಯಾಗಿರುವ ಉಪಚುನಾವಣೆಯಲ್ಲಿ ಒಳಮೀಸಲಾತಿ ಹೋರಾಟಕ್ಕೆ ದ್ರೋಹ ಮಾಡಿದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ತೀರ್ಮಾನವನ್ನು ಸಮಗ್ರ ಒಳಮೀಸಲಾತಿ ಹೋರಾಟಗಾರರು ತೆಗೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಸಾಮಾಜಿಕ ನ್ಯಾಯದ ಈ ಬೇಡಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಎಲ್ಲಾ ಪ್ರಜ್ಞಾವಂತರು ನಮ್ಮ ಈ ನಿಲುವನ್ನು ಬೆಂಬಲಿಸಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಒಳಮೀಸಲಾತಿ ಇಲ್ಲದೆ ತುಂಬಲು ಹೊರಟಿದ್ದ 56,432 ಹುದ್ದೆಗಳನ್ನು ಮುಂದಿನ ಸಚಿವ ಸಂಪುಟ ಸಭೆ ನಡೆಯುವವರೆಗೂ ಸರ್ಕಾರ ನೇಮಕಾತಿ ಮಾಡಬಾರದೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಸಾಮಾಜಿಕ ನ್ಯಾಯವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್‌ ನೇತೃತ್ವದ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಹರಿಕಾರರಾದ ಬಾಬು ಜಗಜೀವನ್‌ ರಾಮ್‌ ಹಾಗೂ ವಿಶ್ವರತ್ನ ಡಾ. ಬಿ. ಆರ್‌ ಅಂಬೇಡ್ಕರ್‌ ರವರ ಜಯಂತಿಯನ್ನು ಆಚರಿಸಲು ಯಾವುದೇ ನೈತಿಕತೆ ಇರುವುದಿಲ್ಲ. ಸಮುದಾಯಗಳು ಮಹನೀಯರ ಜಯಂತಿಯನ್ನು ಆಚರಿಸುತ್ತೇವೆ. ವಿಧಾನಸೌಧ ಮುಂಭಾಗದ ಆಚರಣೆ ಸೇರಿದಂತೆ, ಜಿಲ್ಲಾ ಮಟ್ಟದಲ್ಲಿ ಈ ಮಹನೀಯರ ಜಯಂತಿಯನ್ನು ಆಚರಿಸಲು ಸರ್ಕಾರ ಮುಂದಾದರೆ ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. 

ದಾವಣಗೆರೆ ಉಪ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಮುಂದಿನ ರಾಜ್ಯ ಸಮಿತಿ ಸಭೆಯನ್ನು ದಾವಣಗೆರೆಯಲ್ಲಿ ಕರೆಯಲಾಗಿದೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರಾದ ಮಾರಸಂದ್ರ ಮುನಿಯಪ್ಪ, ಅಂಬಣ್ಣ ಅರೋಲಿಕರ್‌, ಬಸವರಾಜ್‌ ಕೌತಾಳ್‌, ನರಸಪ್ಪ ದಂಡೋರ, ಬಿ. ಆರ್‌ ಭಾಸ್ಕರ್‌ ಪ್ರಸಾದ್‌, ಕರಿಯಪ್ಪ ಗುಡಿಮನಿ, ಎಂ ಗುರುಮೂರ್ತಿ, ಬಿ.ಪಿ ಪ್ರಕಾಶ್‌ ಮೂರ್ತಿ, ಆರ್‌ ಮುನಿಯಪ್ಪ, ಪಿ. ಮೂರ್ತಿ, ವೈ. ಸಿ ಕಾಂಬ್ಳೆ, ಚಾವಡಿ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...