Homeಕರ್ನಾಟಕಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಆಯವ್ಯಯ(ಬಜೆಟ್) ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ(Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸಿಗ್ಗಿ , ಜೊಮಾಟೋ, ಅಮಜಾನ್‌, ಕ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು 12 ಲಕ್ಷ ಜೀವ ವಿಮೆ ಮತ್ತು 12 ಲಕ್ಷ ಅಪಘಾತ ಪರಿಹಾರ ವಿಮಾಸ ಲಭ್ಯ ಸೇರಿ ಒಟ್ಟು 4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ರಾಜ್ಯ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ. 2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಗಿಗ್ ಕಾರ್ಮಿಕರಿಗೆ ಜೀವ ವಿಮೆ: ಷರತ್ತುಗಳು-

  • 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  • ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  • ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  • ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  • ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ಇದನ್ನೂ ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...