Homeಕರ್ನಾಟಕಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಆಯವ್ಯಯ(ಬಜೆಟ್) ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ(Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸಿಗ್ಗಿ , ಜೊಮಾಟೋ, ಅಮಜಾನ್‌, ಕ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು 12 ಲಕ್ಷ ಜೀವ ವಿಮೆ ಮತ್ತು 12 ಲಕ್ಷ ಅಪಘಾತ ಪರಿಹಾರ ವಿಮಾಸ ಲಭ್ಯ ಸೇರಿ ಒಟ್ಟು 4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ರಾಜ್ಯ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ. 2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಗಿಗ್ ಕಾರ್ಮಿಕರಿಗೆ ಜೀವ ವಿಮೆ: ಷರತ್ತುಗಳು-

  • 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  • ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  • ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  • ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  • ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ಇದನ್ನೂ ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...