Homeಕರ್ನಾಟಕಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಆಯವ್ಯಯ(ಬಜೆಟ್) ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ(Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸಿಗ್ಗಿ , ಜೊಮಾಟೋ, ಅಮಜಾನ್‌, ಕ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು 12 ಲಕ್ಷ ಜೀವ ವಿಮೆ ಮತ್ತು 12 ಲಕ್ಷ ಅಪಘಾತ ಪರಿಹಾರ ವಿಮಾಸ ಲಭ್ಯ ಸೇರಿ ಒಟ್ಟು 4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ರಾಜ್ಯ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ. 2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಗಿಗ್ ಕಾರ್ಮಿಕರಿಗೆ ಜೀವ ವಿಮೆ: ಷರತ್ತುಗಳು-

  • 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  • ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  • ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  • ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  • ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ಇದನ್ನೂ ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...