Homeಕರ್ನಾಟಕಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಒಕ್ಕೂಟ ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿರುವಾಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ನಿಧಿಯನ್ನು ಲಸಿಕಾ ಕಾರ್ಯಕ್ಕೆ ಬಳಸಿಕೊಂಡಿರುವುದೇಕೆ?

- Advertisement -
- Advertisement -

ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿರುವುದು ಸಂತೋಷದ ಸಂಗತಿ. ಆದರೆ ಕಾರ್ಮಿಕರಿಗೆ ಲಸಿಕೆ ನೀಡಲು ಕಾರ್ಮಿಕರ ನಿಧಿಯನ್ನು ರಾಜ್ಯ ಸರ್ಕಾರ ಬಳಕೆ ಮಾಡುತ್ತಿರುವುದೇಕೆ? ಇತರರಿಗೆ ಉಚಿತವಾಗಿ ನೀಡುವ ಲಸಿಕೆಯನ್ನು ಕಾರ್ಮಿಕರೇಕೆ ಹಣ ನೀಡಿ ಪಡೆಯಬೇಕು ಎಂಬ ಪ್ರಶ್ನೆಯನ್ನು ಹುಟ್ಟಿಹಾಕಿದೆ ’ದಿ ಪ್ರಿಂಟ್‌’ ಸುದ್ದಿ ಜಾಲತಾಣದ ವರದಿ.

ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿವೆ. ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್ ವರದಿ ಮಾಡಿದೆ.

ಜುಲೈ 20, 2021ರಂದು ಉನ್ನತ ಮಟ್ಟದ ಸಭೆ ನಡೆದಿದ್ದು, ಕಾರ್ಮಿಕರಿಗೆ ಲಸಿಕೆ ನೀಡುವುದಕ್ಕಾಗಿ ಕಾರ್ಮಿಕ ನಿಧಿಯನ್ನು ಬಳಸುವ ಚರ್ಚೆಯಾಗಿತ್ತು. ಅದರಂತೆ ಮುಖ್ಯಕಾರ್ಯದರ್ಶಿಯವರು ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸಲು ಸೂಚಿಸಿದ್ದಾರೆ ಎಂದು ವರದಿ ಹೇಳಿದೆ.

ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಕುಟುಂಬದವರಿಗಾಗಿ ಪಿಂಚಣಿ, ಸಾಲ, ವಿದ್ಯಾರ್ಥಿ ವೇತನ ಇತ್ಯಾದಿ ಕಾರ್ಯಕ್ರಮಗಳಿಗಾಗಿ ಇರುವ ನಿಧಿಯನ್ನು ಸರ್ಕಾರ ಕೋವಿಡ್ ಹೆಸರಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

“ಇದು ಸರ್ಕಾರದ ಹಣವಲ್ಲ. ಕಟ್ಟಡ ಕಾರ್ಮಿಕರಿಗೆ ಇನ್ಶೂರೆನ್ಸ್, ಪರಿಹಾರ, ಟೂಲ್ ಕಿಟ್, ಪಿಂಚಣಿಗಳನ್ನು ಒದಲಿಸಲೆಂದು ಬಿಲ್ಡರ್ ಗಳು ನೀಡುವ ಸೆಸ್ ನಿಂದ ಸಂಗ್ರಹವಾಗುವ ನಿಧಿ ಇದು” ಎಂದು ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಹಾಗೂ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿನ್ ಆಫ್ ಟ್ರೆಂಡ್‌ ಯೂನಿಯನ್ ಸದಸ್ಯ ಪಿ.ಪಿ.ಅಪ್ಪಣ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...