Homeಕರ್ನಾಟಕಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಒಕ್ಕೂಟ ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿರುವಾಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ನಿಧಿಯನ್ನು ಲಸಿಕಾ ಕಾರ್ಯಕ್ಕೆ ಬಳಸಿಕೊಂಡಿರುವುದೇಕೆ?

- Advertisement -
- Advertisement -

ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿರುವುದು ಸಂತೋಷದ ಸಂಗತಿ. ಆದರೆ ಕಾರ್ಮಿಕರಿಗೆ ಲಸಿಕೆ ನೀಡಲು ಕಾರ್ಮಿಕರ ನಿಧಿಯನ್ನು ರಾಜ್ಯ ಸರ್ಕಾರ ಬಳಕೆ ಮಾಡುತ್ತಿರುವುದೇಕೆ? ಇತರರಿಗೆ ಉಚಿತವಾಗಿ ನೀಡುವ ಲಸಿಕೆಯನ್ನು ಕಾರ್ಮಿಕರೇಕೆ ಹಣ ನೀಡಿ ಪಡೆಯಬೇಕು ಎಂಬ ಪ್ರಶ್ನೆಯನ್ನು ಹುಟ್ಟಿಹಾಕಿದೆ ’ದಿ ಪ್ರಿಂಟ್‌’ ಸುದ್ದಿ ಜಾಲತಾಣದ ವರದಿ.

ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿವೆ. ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್ ವರದಿ ಮಾಡಿದೆ.

ಜುಲೈ 20, 2021ರಂದು ಉನ್ನತ ಮಟ್ಟದ ಸಭೆ ನಡೆದಿದ್ದು, ಕಾರ್ಮಿಕರಿಗೆ ಲಸಿಕೆ ನೀಡುವುದಕ್ಕಾಗಿ ಕಾರ್ಮಿಕ ನಿಧಿಯನ್ನು ಬಳಸುವ ಚರ್ಚೆಯಾಗಿತ್ತು. ಅದರಂತೆ ಮುಖ್ಯಕಾರ್ಯದರ್ಶಿಯವರು ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸಲು ಸೂಚಿಸಿದ್ದಾರೆ ಎಂದು ವರದಿ ಹೇಳಿದೆ.

ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಕುಟುಂಬದವರಿಗಾಗಿ ಪಿಂಚಣಿ, ಸಾಲ, ವಿದ್ಯಾರ್ಥಿ ವೇತನ ಇತ್ಯಾದಿ ಕಾರ್ಯಕ್ರಮಗಳಿಗಾಗಿ ಇರುವ ನಿಧಿಯನ್ನು ಸರ್ಕಾರ ಕೋವಿಡ್ ಹೆಸರಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

“ಇದು ಸರ್ಕಾರದ ಹಣವಲ್ಲ. ಕಟ್ಟಡ ಕಾರ್ಮಿಕರಿಗೆ ಇನ್ಶೂರೆನ್ಸ್, ಪರಿಹಾರ, ಟೂಲ್ ಕಿಟ್, ಪಿಂಚಣಿಗಳನ್ನು ಒದಲಿಸಲೆಂದು ಬಿಲ್ಡರ್ ಗಳು ನೀಡುವ ಸೆಸ್ ನಿಂದ ಸಂಗ್ರಹವಾಗುವ ನಿಧಿ ಇದು” ಎಂದು ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಹಾಗೂ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿನ್ ಆಫ್ ಟ್ರೆಂಡ್‌ ಯೂನಿಯನ್ ಸದಸ್ಯ ಪಿ.ಪಿ.ಅಪ್ಪಣ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...