Homeಕರ್ನಾಟಕಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ಒಕ್ಕೂಟ ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿರುವಾಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ನಿಧಿಯನ್ನು ಲಸಿಕಾ ಕಾರ್ಯಕ್ಕೆ ಬಳಸಿಕೊಂಡಿರುವುದೇಕೆ?

- Advertisement -
- Advertisement -

ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿರುವುದು ಸಂತೋಷದ ಸಂಗತಿ. ಆದರೆ ಕಾರ್ಮಿಕರಿಗೆ ಲಸಿಕೆ ನೀಡಲು ಕಾರ್ಮಿಕರ ನಿಧಿಯನ್ನು ರಾಜ್ಯ ಸರ್ಕಾರ ಬಳಕೆ ಮಾಡುತ್ತಿರುವುದೇಕೆ? ಇತರರಿಗೆ ಉಚಿತವಾಗಿ ನೀಡುವ ಲಸಿಕೆಯನ್ನು ಕಾರ್ಮಿಕರೇಕೆ ಹಣ ನೀಡಿ ಪಡೆಯಬೇಕು ಎಂಬ ಪ್ರಶ್ನೆಯನ್ನು ಹುಟ್ಟಿಹಾಕಿದೆ ’ದಿ ಪ್ರಿಂಟ್‌’ ಸುದ್ದಿ ಜಾಲತಾಣದ ವರದಿ.

ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿವೆ. ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್ ವರದಿ ಮಾಡಿದೆ.

ಜುಲೈ 20, 2021ರಂದು ಉನ್ನತ ಮಟ್ಟದ ಸಭೆ ನಡೆದಿದ್ದು, ಕಾರ್ಮಿಕರಿಗೆ ಲಸಿಕೆ ನೀಡುವುದಕ್ಕಾಗಿ ಕಾರ್ಮಿಕ ನಿಧಿಯನ್ನು ಬಳಸುವ ಚರ್ಚೆಯಾಗಿತ್ತು. ಅದರಂತೆ ಮುಖ್ಯಕಾರ್ಯದರ್ಶಿಯವರು ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸಲು ಸೂಚಿಸಿದ್ದಾರೆ ಎಂದು ವರದಿ ಹೇಳಿದೆ.

ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಕುಟುಂಬದವರಿಗಾಗಿ ಪಿಂಚಣಿ, ಸಾಲ, ವಿದ್ಯಾರ್ಥಿ ವೇತನ ಇತ್ಯಾದಿ ಕಾರ್ಯಕ್ರಮಗಳಿಗಾಗಿ ಇರುವ ನಿಧಿಯನ್ನು ಸರ್ಕಾರ ಕೋವಿಡ್ ಹೆಸರಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

“ಇದು ಸರ್ಕಾರದ ಹಣವಲ್ಲ. ಕಟ್ಟಡ ಕಾರ್ಮಿಕರಿಗೆ ಇನ್ಶೂರೆನ್ಸ್, ಪರಿಹಾರ, ಟೂಲ್ ಕಿಟ್, ಪಿಂಚಣಿಗಳನ್ನು ಒದಲಿಸಲೆಂದು ಬಿಲ್ಡರ್ ಗಳು ನೀಡುವ ಸೆಸ್ ನಿಂದ ಸಂಗ್ರಹವಾಗುವ ನಿಧಿ ಇದು” ಎಂದು ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಹಾಗೂ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿನ್ ಆಫ್ ಟ್ರೆಂಡ್‌ ಯೂನಿಯನ್ ಸದಸ್ಯ ಪಿ.ಪಿ.ಅಪ್ಪಣ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...