Homeಕರ್ನಾಟಕಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ಒದಗಿಸಲು ಪ್ರತ್ಯೇಕ ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಮುಂದಾಗಿರುವ ಕಾರ್ಮಿಕ ಇಲಾಖೆ, ಅದಕ್ಕೆ ಪೂರಕವಾಗಿ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು ರೂಪಿಸಿದೆ.

ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ–2024ರ ಕರಡನ್ನು ಕಾರ್ಮಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದ್ದು, ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಕಾನೂನು ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಕರಡು ಮಸೂದೆ ಪ್ರಕಟಿಸಿದೆ. ಕಳೆದ ವರ್ಷ ಜುಲೈನಲ್ಲಿ ರಾಜಸ್ಥಾನ ಇದೇ ರೀತಿಯ ಕಾನೂನನ್ನು ಅಂಗೀಕರಿಸಿತ್ತು. ಈ ಮೂಲಕ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ರೂಪಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿತ್ತು.

ಗಿಗ್‌ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸಿ ಅವರಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವ ಪ್ರಸ್ತಾವ ಮಸೂದೆಯಲ್ಲಿದೆ. ಇದಕ್ಕಾಗಿ ಗಿಗ್‌ ಕಾರ್ಮಿಕರ ಕೆಲಸಕ್ಕೆ ವಿಧಿಸುವ ಶುಲ್ಕಕ್ಕೆ ಅನುಸಾರವಾಗಿ ಪ್ರತ್ಯೇಕ ಸೆಸ್‌ ಸಂಗ್ರಹಿಸುವ ಪ್ರಸ್ತಾವವೂ ಇದೆ. ನೋಂದಣಿ ಶುಲ್ಕವೂ ಸೇರಿದಂತೆ ಸಂಗ್ರಹವಾಗುವ ಎಲ್ಲ ಮೊತ್ತವನ್ನು ಗಿಗ್‌ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಬಳಸಲಾಗುತ್ತದೆ.

ಗಿಗ್‌ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಕಂಪನಿಯು ಎಲ್ಲಾ ಕಾರ್ಮಿಕರ ಮಾಹಿತಿಯನ್ನು ಮಂಡಳಿ ಜೊತೆ ಹಂಚಿಕೊಳ್ಳಬೇಕು. ಸೇವಾದಾರ ಕಂಪನಿಯೂ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಮಸೂದೆಯ ಪ್ರಕಾರ, ನಿರ್ದಿಷ್ಟ ಕಾರಣಗಳಲ್ಲದೇ ಗಿಗ್‌ ಕಾರ್ಮಿಕರನ್ನು ಕೆಲಸದಿಂದ ಕೈಬಿಡುವಂತಿಲ್ಲ. ಅವರಿಗೆ ಪಾವತಿಸಬೇಕಾದ ಮೊತ್ತದಲ್ಲಿ ಕಡಿತ ಮಾಡುವಂತಿಲ್ಲ.

ಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸುವ ಅಧಿಕಾರವೂ ಮಂಡಳಿಗೆ ಇರುತ್ತದೆ. ಕಾಯ್ದೆಯನ್ನು ಉಲ್ಲಂಘಿಸುವವರಿಗೆ 1 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವುದಕ್ಕೂ ಅವಕಾಶ ಇರಲಿದೆ. ಗಿಗ್‌ ಕಾರ್ಮಿಕರ ಸೇವೆ ಬಳಸಿಕೊಳ್ಳುವ ಕಂಪನಿಗಳಲ್ಲಿ ತಪಾಸಣೆ ನಡೆಸುವ ಅಧಿಕಾರವನ್ನೂ ಮಸೂದೆಯು ಕಾರ್ಮಿಕ ಇಲಾಖೆಗೆ ನೀಡಲಿದೆ.

ಉದ್ಯೋಗದಾತ ಮತ್ತು ಉದ್ಯೋಗಿ ಎಂಬ ನಿಯಮಗಳ ಹೊರತಾಗಿರುವ ಕೆಲಸಗಳನ್ನು ಮಾಡಿ ಸಂಪಾದನೆ ಮಾಡುವ ವ್ಯಕ್ತಿಗಳನ್ನು ಗಿಗ್ ಕಾರ್ಮಿಕರು ಎನ್ನಲಾಗುತ್ತದೆ. ಜೊಮ್ಯಾಟೋ, ಸ್ವಿಗ್ಗಿಯಂತಹ ಡೆಲಿವರಿ ಬಾಯ್‌ಗಳು ಈ ಕಾರ್ಮಿಕರ ವರ್ಗಕ್ಕೆ ಸೇರುತ್ತಾರೆ.

ದೇಶದಲ್ಲಿ ಗಿಗ್ ಕಾರ್ಮಿಕರ ನಿಖರ ಸಂಖ್ಯೆಯ ಬಗ್ಗೆ ಯಾವುದೇ ಸರ್ಕಾರಿ ಮಾಹಿತಿ ಇಲ್ಲ. ಆದಾಗ್ಯೂ, ಕರ್ನಾಟಕದ ಬೆಂಗಳೂರಿನಲ್ಲಿ ಮಾತ್ರ ಸುಮಾರು ಎರಡು ಲಕ್ಷ ಗಿಗ್ ಕಾರ್ಮಿಕರು ಜೊಮ್ಯಾಟೋ, ಪೋರ್ಟರ್, ಸ್ವಿಗ್ಗಿ ಮತ್ತು ಡೆಂಝೋದಂತಹ ವಿವಿಧ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ದುಡಿಯುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...