Homeಕರ್ನಾಟಕಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ಒದಗಿಸಲು ಪ್ರತ್ಯೇಕ ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಮುಂದಾಗಿರುವ ಕಾರ್ಮಿಕ ಇಲಾಖೆ, ಅದಕ್ಕೆ ಪೂರಕವಾಗಿ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು ರೂಪಿಸಿದೆ.

ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ–2024ರ ಕರಡನ್ನು ಕಾರ್ಮಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದ್ದು, ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಕಾನೂನು ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಕರಡು ಮಸೂದೆ ಪ್ರಕಟಿಸಿದೆ. ಕಳೆದ ವರ್ಷ ಜುಲೈನಲ್ಲಿ ರಾಜಸ್ಥಾನ ಇದೇ ರೀತಿಯ ಕಾನೂನನ್ನು ಅಂಗೀಕರಿಸಿತ್ತು. ಈ ಮೂಲಕ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ರೂಪಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿತ್ತು.

ಗಿಗ್‌ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸಿ ಅವರಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವ ಪ್ರಸ್ತಾವ ಮಸೂದೆಯಲ್ಲಿದೆ. ಇದಕ್ಕಾಗಿ ಗಿಗ್‌ ಕಾರ್ಮಿಕರ ಕೆಲಸಕ್ಕೆ ವಿಧಿಸುವ ಶುಲ್ಕಕ್ಕೆ ಅನುಸಾರವಾಗಿ ಪ್ರತ್ಯೇಕ ಸೆಸ್‌ ಸಂಗ್ರಹಿಸುವ ಪ್ರಸ್ತಾವವೂ ಇದೆ. ನೋಂದಣಿ ಶುಲ್ಕವೂ ಸೇರಿದಂತೆ ಸಂಗ್ರಹವಾಗುವ ಎಲ್ಲ ಮೊತ್ತವನ್ನು ಗಿಗ್‌ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಬಳಸಲಾಗುತ್ತದೆ.

ಗಿಗ್‌ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಕಂಪನಿಯು ಎಲ್ಲಾ ಕಾರ್ಮಿಕರ ಮಾಹಿತಿಯನ್ನು ಮಂಡಳಿ ಜೊತೆ ಹಂಚಿಕೊಳ್ಳಬೇಕು. ಸೇವಾದಾರ ಕಂಪನಿಯೂ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಮಸೂದೆಯ ಪ್ರಕಾರ, ನಿರ್ದಿಷ್ಟ ಕಾರಣಗಳಲ್ಲದೇ ಗಿಗ್‌ ಕಾರ್ಮಿಕರನ್ನು ಕೆಲಸದಿಂದ ಕೈಬಿಡುವಂತಿಲ್ಲ. ಅವರಿಗೆ ಪಾವತಿಸಬೇಕಾದ ಮೊತ್ತದಲ್ಲಿ ಕಡಿತ ಮಾಡುವಂತಿಲ್ಲ.

ಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸುವ ಅಧಿಕಾರವೂ ಮಂಡಳಿಗೆ ಇರುತ್ತದೆ. ಕಾಯ್ದೆಯನ್ನು ಉಲ್ಲಂಘಿಸುವವರಿಗೆ 1 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವುದಕ್ಕೂ ಅವಕಾಶ ಇರಲಿದೆ. ಗಿಗ್‌ ಕಾರ್ಮಿಕರ ಸೇವೆ ಬಳಸಿಕೊಳ್ಳುವ ಕಂಪನಿಗಳಲ್ಲಿ ತಪಾಸಣೆ ನಡೆಸುವ ಅಧಿಕಾರವನ್ನೂ ಮಸೂದೆಯು ಕಾರ್ಮಿಕ ಇಲಾಖೆಗೆ ನೀಡಲಿದೆ.

ಉದ್ಯೋಗದಾತ ಮತ್ತು ಉದ್ಯೋಗಿ ಎಂಬ ನಿಯಮಗಳ ಹೊರತಾಗಿರುವ ಕೆಲಸಗಳನ್ನು ಮಾಡಿ ಸಂಪಾದನೆ ಮಾಡುವ ವ್ಯಕ್ತಿಗಳನ್ನು ಗಿಗ್ ಕಾರ್ಮಿಕರು ಎನ್ನಲಾಗುತ್ತದೆ. ಜೊಮ್ಯಾಟೋ, ಸ್ವಿಗ್ಗಿಯಂತಹ ಡೆಲಿವರಿ ಬಾಯ್‌ಗಳು ಈ ಕಾರ್ಮಿಕರ ವರ್ಗಕ್ಕೆ ಸೇರುತ್ತಾರೆ.

ದೇಶದಲ್ಲಿ ಗಿಗ್ ಕಾರ್ಮಿಕರ ನಿಖರ ಸಂಖ್ಯೆಯ ಬಗ್ಗೆ ಯಾವುದೇ ಸರ್ಕಾರಿ ಮಾಹಿತಿ ಇಲ್ಲ. ಆದಾಗ್ಯೂ, ಕರ್ನಾಟಕದ ಬೆಂಗಳೂರಿನಲ್ಲಿ ಮಾತ್ರ ಸುಮಾರು ಎರಡು ಲಕ್ಷ ಗಿಗ್ ಕಾರ್ಮಿಕರು ಜೊಮ್ಯಾಟೋ, ಪೋರ್ಟರ್, ಸ್ವಿಗ್ಗಿ ಮತ್ತು ಡೆಂಝೋದಂತಹ ವಿವಿಧ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ದುಡಿಯುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...