Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...