Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...