Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...