Homeಕರ್ನಾಟಕ'ನಲಿ ಕಲಿ' ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

- Advertisement -
- Advertisement -

ಒಂದರಿಂದ ಮೂರನೇ ತರಗತಿವರೆಗಿನ ಮಕ್ಕಳು ‘ಚಟುವಟಿಕೆ ಆಧಾರಿತ ಕಲಿಕೆ’ಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಪರಿವರ್ತಕ’ ಕಾರ್ಯಕ್ರಮ ಎಂದು ಪ್ರಚಾರ ಮಾಡಲಾಗಿದ್ದ ‘ನಲಿ ಕಲಿ’ ಉಪಕ್ರಮವನ್ನು ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

2009ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದ ನಲಿ ಕಲಿ ಕಾರ್ಯಕ್ರಮ, ಒಂದರಿಂದ ಮೂರನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಂದೇ ತರಗತಿ ಕೊಠಡಿಯಲ್ಲಿ ಒಟ್ಟುಗೂಡಿಸಿ ವಿವಿಧ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ತೊಡಗಿಸಿಳ್ಳುವಂತೆ ಮಾಡಲಾಗುತ್ತದೆ.

‘ನಲಿ ಕಲಿ’ 1995ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್.ಡಿ ಕೋಟೆ) ತಾಲೂಕಿನಲ್ಲಿ ಯುನಿಸೆಫ್ ಸಹಾಯದೊಂದಿಗೆ ಪ್ರಾಯೋಗಿಕವಾಗಿ (ಪೈಲಟ್) ಆರಂಭವಾಯಿತು. ಆದಿವಾಸಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೊಡುವ ಉದ್ದೇಶದಿಂದ ರಿಷಿ ವ್ಯಾಲಿ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ರಿಸೋರ್ಸಸ್ (RiVER) ಸಹಕಾರದೊಂದಿಗೆ ಇದನ್ನು ಜಾರಿಗೆ ತರಲಾಯಿತು. ನಂತರ 1998ರಲ್ಲಿ ರಾಯಚೂರು ಜಿಲ್ಲೆ ಸೇರಿದಂತೆ ಕೆಲವೆಡೆ ನಲಿ ಕಲಿ ಇನ್ನೊಂದು ಪ್ರಾಯೋಗಿಕ ಹಂತಕ್ಕೆ ಬಂತು.

2009ರಲ್ಲಿ ನಲಿ ಕಲಿ ರಾಜ್ಯದಾದ್ಯಂತ ಸಂಪೂರ್ಣವಾಗಿ ಜಾರಿಗೆ ಬಂತು. ಆದರೆ, ಇದು ಹೊಸ ಉಪಕ್ರಮದ ಆರಂಭವಾಗಿರಲಿಲ್ಲ. ಆಗಲೇ ನಡೆಯುತ್ತಿದ್ದ ಪ್ರಾಯೋಗಿಕ ಹಂತದಿಂದ ಪೂರ್ಣ ಅನುಷ್ಠಾನಕ್ಕೆ ಬದಲಾವಣೆ ಮಾಡಲಾಗಿತ್ತು.

ಇಂದು ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (ಸುಮಾರು 40,000ಕ್ಕೂ ಹೆಚ್ಚು) ಕಡ್ಡಾಯವಾಗಿ ನಲಿ ಕಲಿ ಕಾರ್ಯಕ್ರಮ ಜಾರಿಯಲ್ಲಿದ್ದು, District Institute of Education and Training (DIET) ಮತ್ತು Directorate of State Educational Research and Training (DSERT)ಗಳ ಮೂಲಕ ನಿರ್ವಹಣೆಯಾಗುತ್ತಿದೆ.

‘ನಲಿ ಕಲಿ’ ಉಪಕ್ರಮ ಸ್ಥಗಿತಗೊಳಿಸಿದ ಬಳಿಕ, ಅದಕ್ಕೆ ಬಳಸಲಾಗುತ್ತಿರುವ ತರಗತಿ ಕೊಠಡಿಗಳನ್ನು ಹಂತ ಹಂತವಾಗಿ ಏಕ ತರಗತಿ ಕೊಠಡಿಗಳಾಗಿ ಪರಿವರ್ತಿಸಲಾಗುವುದು. ಮೊದಲ ಹಂತದಲ್ಲಿ, ದ್ವಿಭಾಷಾ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಶಾಲೆಗಳು ಸೇರಿದಂತೆ 29,000 ಶಾಲೆಗಳಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು” ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ಮಂಗಳವಾರ (ನ.4) ವರದಿ ಮಾಡಿದೆ.

ನಲಿ ಕಲಿಯಿಂದಾಗಿ ಮಕ್ಕಳು ಒಂದು ವಾಕ್ಯ ರಚಿಸಲು ಹೆಣಗಾಡುತ್ತಿದ್ದಾರೆ. ಇದು ಅವರು ಮುಂದಿನ ತರಗತಿಗಳಿಗೆ ಹೋದಂತೆ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದು ಖಚಿತ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂಬುವುದಾಗಿ ಮೂಲಗಳು ಹೇಳಿವೆ ಎಂದು ವರದಿ ತಿಳಿಸಿದೆ.

ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿರುವ ಕುರಿತು ಶಿಕ್ಷಣ ತಜ್ಞ ಹಾಗೂ ಚಿಂತಕ ಶ್ರೀಪಾದ್ ಭಟ್ ಅವರು ನಾನುಗೌರಿ.ಕಾಂ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ನಲಿ ಕಲಿ ಉಪಕ್ರಮದ ಜಾರಿಯ ಕ್ರಮವೇ ಬದಲಾಗಿದೆ. ಹಾಗಾಗಿ, ಅದನ್ನು ಸ್ಥಗಿತಗೊಳಿಸುವುದೇ ಉತ್ತಮ ಎಂದಿದ್ದಾರೆ.

ಅನಿತಾ ಕೌಲ್ ಎಂಬ ಐಎಎಸ್ ಅಧಿಕಾರಿಯ ಮುತುವರ್ಜಿಯಿಂದ ಜಾರಿಗೆ ಬಂದ ಈ ಕಾರ್ಯಕ್ರಮದ ಉದ್ದೇಶ ಅತ್ಯುತ್ತಮವಾಗಿದೆ. ಪುಸ್ತಕಗಳ ಹೊರತಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಯತ್ನವನ್ನು ಇದರ ಮೂಲಕ ಮಾಡಲಾಗಿತ್ತು. ಆದರೆ, ಬರುಬರುತ್ತಾ ಆಡಳಿತದ (ಸರ್ಕಾರದ) ಬೇಜವಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಹಳ್ಳ ಹಿಡಿಯಿತು ಎಂದು ಹೇಳಿದ್ದಾರೆ.

ನಲಿ ಕಲಿ ಕಾರ್ಯಕ್ರಮ ಉತ್ತಮವಾಗಿದ್ದರೂ, ಅದನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಜಾರಿಗೆ ತರಲಾಯಿತು. ಖಾಸಗಿ ಶಾಲೆಗಳಲ್ಲಿ ಅದು ಜಾರಿಗೆ ಬರಲಿಲ್ಲ. ಹಾಗಾಗಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳ ಕಲಿಕಾ ವಿಧಾನ ಬದಲಾಯಿತು. ಖಾಸಗಿ ಶಾಲೆಗಳ ಮಕ್ಕಳು ಪುಸ್ತಕ ಆಧಾರಿತ ಕಲಿಕಾ ವಿಧಾನದ ಮೂಲಕ ಮುಂದುವರಿಯುತ್ತಿದ್ದರೆ, ನಲಿಕಲಿಯ ಪ್ರಾಯೋಗಿಕ ಕಲಿಕೆ ಸರಿಯಾಗಿ ಜಾರಿಯಾಗದೆ ಸರ್ಕಾರಿ ಶಾಲೆಯ ಮಕ್ಕಳು ಹಿಂದುಳಿದರು. ಇದು ನಲಿಕಲಿ ಕಾರ್ಯಕ್ರಮದ ಬಗ್ಗೆ ಪೋಷಕರಲ್ಲೇ ಅಸಮಾಧಾನ ಮೂಡುವಂತೆ ಮಾಡಿತು ಎಂದಿದ್ದಾರೆ.

ನಲಿಕಲಿ ಕಾರ್ಯಕ್ರಮದಲ್ಲಿ 1ರಿಂದ 3ನೇ ತರಗತಿವರೆಗಿನ ಮಕ್ಕಳನ್ನು ಒಂದೇ ತರಗತಿ ಕೊಠಡಿಯಲ್ಲಿ ಕೂರಿಸಿ ಕಲಿಸುವ ವಿಧಾನವಿದೆ. ಇದನ್ನೇ ಲಾಭ ಮಾಡಿಕೊಂಡ ಸರ್ಕಾರ ಮೂರು ತರಗತಿಗಳಿಗೆ ಮೂವರು ಶಿಕ್ಷಕರನ್ನು ನೇಮಿಸುವ ಬದಲು, ಒಬ್ಬರೇ ಶಿಕ್ಷಕರನ್ನು ನೇಮಿಸಲು ಶುರು ಮಾಡಿತು. ಅದರಲ್ಲೂ ನಲಿಕಲಿ ತರಗತಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಅಥಿತಿ ಶಿಕ್ಷಕರನ್ನು ನೇಮಿಸಲು ಪ್ರಾರಂಭಿಸಿತು. ಆ ಅತಿಥಿ ಶಿಕ್ಷಕರಿಗೆ ನಲಿಕಲಿಯ ಮೂಲ ಉದ್ದೇಶವೇ ಗೊತ್ತಿರುವುದಿಲ್ಲ. ಇದರಿಂದ ಕಾರ್ಯಕ್ರಮದ ಉದ್ದೇಶವೇ ಬದಲಾಯಿತು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿ, ಅದರಲ್ಲೂ ರಾಯಚೂರಿನಂತಹ ಜಿಲ್ಲೆಗಳಲ್ಲಿ 1ರಿಂದ 3ನೇ ತರಗತಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಒಂದೇ ನಲಿಕಲಿ ತರಗತಿಯಲ್ಲಿ ಕೂರಿಸಿ ಅವರಿಗೆ ಪಾಠ ಮಾಡುವುದು ಸವಾಲಾಯಿತು. ಇದರಿಂದ ಮಕ್ಕಳು ಕಲಿಯಲು ಅಸಾಧ್ಯವಾಯಿತು. 1ನೇ ತರಗತಿ ಮತ್ತು 3ನೇ ತರಗತಿ ಮಕ್ಕಳ ನಡುವಿನ ವಯಸ್ಸಿನ ಅಂತರವೂ, ಅವರು ಒಂದೇ ತರಗತಿಯಲ್ಲಿ ಹೊಂದಿಕೊಳ್ಳುವುದಕ್ಕೆ ಅಡ್ಡಿಯಾಯಿತು. ಇವೆಲ್ಲವೂ ಕಾರ್ಯಕ್ರಮ ಹಳ್ಳ ಹಿಡಿಯಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಉತ್ತಮ ಉದ್ದೇಶದಿಂದ ನಲಿಕಲಿ ಕಾರ್ಯಕ್ರಮ ಪ್ರಾರಂಭಿಸಿದ್ದರೂ, ಅದನ್ನು ಸರ್ಕಾರ ಜಾರಿ ಮಾಡಿದ ರೀತಿಯಿಂದ ಈಗ ಸಮಸ್ಯೆಗಳಿಂದ ತುಂಬಿಕೊಂಡಿದೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ನಲಿಕಲಿಯ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಲಿಕೆಯಲ್ಲಿ ಹಿಂದುಳಿದಿರುವುದು ಸತ್ಯ. ಹೀಗಿರುವಾಗ ಈ ಕಾರ್ಯಕ್ರಮವನ್ನು ಕೈಬಿಟ್ಟು ಪ್ರತ್ಯೇಕ ತರಗತಿಗಳನ್ನು ನಡೆಸುವುದು ಒಳಿತು. ಸರ್ಕಾರ ಪ್ರತೀ ತರಗತಿಗೆ ಅಗತ್ಯ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಶ್ರೀಪಾದ್ ಭಟ್ ಹೇಳಿದ್ದಾರೆ.

ಶಿಕ್ಷಣ ತಜ್ಞ ನಿರಂಜನಾರಾಧ್ಯ ಮಾತನಾಡಿ, “ಒಂದೇ ಕೊಠಡಿಯಲ್ಲಿ ಮೂರು ತರಗತಿಗಳ ಮಕ್ಕಳನ್ನು ಕೂರಿಸಿ ಪಾಠ ಹೇಳಿಕೊಡುವ ಕ್ರಮ ಅಷ್ಟೊಂದು ಸರಿಯಾಗಿಲ್ಲ. ಹಾಗಾಗಿ, ಸರ್ಕಾರ ನಲಿಕಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಿ. ಅದರ ಬದಲಾಗಿ ಪ್ರತ್ಯೇಕ ತರಗತಿಗಳನ್ನು ನಡೆಸಲಿ. ಅದಕ್ಕೆ ಅಗತ್ಯವಿರುವ ಶಿಕ್ಷಕರು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಿ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...