- Advertisement -
- Advertisement -
ಮೈಕ್ರೊ ಫೈನಾನ್ಸ್ ಕಂಪನಿಗಳು ಜನ ಸಾಮಾನ್ಯರ ಮೇಲೆ ನಡೆಸುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ತಿರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಶುಕ್ರವಾರ (ಫೆ.7) ತಿಳಿಸಿದೆ.
ಈ ಕೆಳಗಿನ ಕಾರಣಗಳನ್ನು ನೀಡಿ ಸುಗ್ರೀವಾಜ್ಞೆ ತಿರಸ್ಕರಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
- ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ ₹ 5 ಲಕ್ಷ ದಂಡ ವಿಪರೀತವಾಗಿದೆ.
- ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
- ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ.
ಜನವರಿ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿತ್ತು.
ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ


