Homeಕರ್ನಾಟಕಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

- Advertisement -
- Advertisement -

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು.

“ಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಕಳೆದವಾರ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಷ್ಟ್ರಪತಿ ಪರಿಶೀಲನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರನ್ನು ಕೋರಿತ್ತು.

ಎರಡನೇ ಬಾರಿಯೂ ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಮೊದಲ ಬಾರಿ ಕಳುಹಿಸಿದ್ದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನೇ ತಿಳಿಸಿದ್ದಾರೆ. ಅಲ್ಲದೆ, ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ಅಲ್ಲದೆ, “ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ. ಈ ಕಾರಣಕ್ಕೆ ಮಸೂದೆಗೆ ಅಂಕಿತ ಹಾಕದೆ ರಾಷ್ಟ್ರಪತಿಯ ಪರಿಶೀಲನೆಗೆ ಬಿಡಲು ನಿರ್ಧರಿಸಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ತಿರುಗೇಟು ಕೊಟ್ಟ ರಾಜ್ಯಪಾಲರು

ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಬಿಕ್ಕಟ್ಟು ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾದೊಂದಿಗೆ ದ್ವೇಷ ಸಾಧಿಸಿದಂತೆ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಲಯವೇ ನೇರವಾಗಿ ಸುಮಾರು 10 ಮಸೂದೆಗಳನ್ನು ಅಂಗೀಕರಿಸಿತ್ತು.

ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಅತಿ ಮಹತ್ವದ ಈ ತೀರ್ಪನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸಿಎಂಗಳು ಸ್ವಾಗತಿಸಿದ್ದರು. ಈಗ ಅದೇ ತೀರ್ಪಿನ ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರು ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ಯಾರಾಗ್ರಾಫ್ 412 ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು,”ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದಿದ್ದಾರೆ.

ಮುಂದುವರಿದು, “ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿದ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಈ ಹಂತದಲ್ಲಿ ಮಧ್ಯಪ್ರವೇಶಿಸದಿರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಏಕೆಂದರೆ ಈ ವಿಷಯವು ಸಂವಿಧಾನದ 14 ಮತ್ತು 15 ನೇ ವಿಧಿಗಳು ಹಾಗೂ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಂದ ವಿಧಿಸಲಾದ ನಿರ್ಬಂಧಗಳನ್ನು ಒಳಗೊಂಡಿದೆ” ಎಂದು ಹೇಳಿದ್ದಾರೆ.

ಏನಿದು ಮುಸ್ಲಿಂ ಮೀಸಲು ಮಸೂದೆ?

ನಿಜವಾಗಿಯೂ ಇದು ಮುಸ್ಲಿಂ ಮೀಸಲು ಮಸೂದೆಯಲ್ಲ. ಮಸೂದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಮುಸ್ಲಿಂ ಮೀಸಲು ಮಸೂದೆ ಎನ್ನಲಾಗುತ್ತಿದೆ.

1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತಂದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025ಕ್ಕೆ ವಿಧಾನಮಂಡಲದ ಅನುಮೋದನೆ ಪಡೆಯಲಾಗಿದೆ. ಇದು ರಾಜ್ಯಪಾಲರ ಅಂಕಿತಕ್ಕೆ ಅಥವಾ ರಾಷ್ಟ್ರಪತಿಯ ಪರಿಶೀಲನೆಗೆ ಬಾಕಿಯಿದೆ.

ತಿದ್ದುಪಡಿ ಮಸೂದೆಯಲ್ಲಿ ರೂ. 2 ಕೋಟಿವರೆಗಿನ ಸಿವಿಲ್ ಕೆಲಸಗಳ ಸರ್ಕಾರಿ ಟೆಂಡರ್‌ಗಳಲ್ಲಿ ಮತ್ತು ರೂ. 1 ಕೋಟಿವರೆಗಿನ ಸರಕು/ಸೇವೆಗಳ ಸಂಗ್ರಹಣೆಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4 ಶೇಕಡ ಮೀಸಲಾತಿ ಪರಿಚಯಿಸಲಾಗಿದೆ. ನಿರುದ್ಯೋಗವನ್ನು ಪರಿಹರಿಸುವ ಮತ್ತು ಹಿಂದುಳಿದ ವರ್ಗಗಳ ವರ್ಗ 2ಬಿಯ (ಮುಸ್ಲಿಮರು) ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಬಿಜೆಪಿಯವರು Sorry ಸಾವರ್ಕರ್‌ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...