Homeಕರ್ನಾಟಕಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

- Advertisement -
- Advertisement -

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು.

“ಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಕಳೆದವಾರ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಷ್ಟ್ರಪತಿ ಪರಿಶೀಲನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರನ್ನು ಕೋರಿತ್ತು.

ಎರಡನೇ ಬಾರಿಯೂ ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಮೊದಲ ಬಾರಿ ಕಳುಹಿಸಿದ್ದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನೇ ತಿಳಿಸಿದ್ದಾರೆ. ಅಲ್ಲದೆ, ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ಅಲ್ಲದೆ, “ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ. ಈ ಕಾರಣಕ್ಕೆ ಮಸೂದೆಗೆ ಅಂಕಿತ ಹಾಕದೆ ರಾಷ್ಟ್ರಪತಿಯ ಪರಿಶೀಲನೆಗೆ ಬಿಡಲು ನಿರ್ಧರಿಸಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ತಿರುಗೇಟು ಕೊಟ್ಟ ರಾಜ್ಯಪಾಲರು

ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಬಿಕ್ಕಟ್ಟು ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾದೊಂದಿಗೆ ದ್ವೇಷ ಸಾಧಿಸಿದಂತೆ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಲಯವೇ ನೇರವಾಗಿ ಸುಮಾರು 10 ಮಸೂದೆಗಳನ್ನು ಅಂಗೀಕರಿಸಿತ್ತು.

ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಅತಿ ಮಹತ್ವದ ಈ ತೀರ್ಪನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸಿಎಂಗಳು ಸ್ವಾಗತಿಸಿದ್ದರು. ಈಗ ಅದೇ ತೀರ್ಪಿನ ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರು ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ಯಾರಾಗ್ರಾಫ್ 412 ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು,”ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದಿದ್ದಾರೆ.

ಮುಂದುವರಿದು, “ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿದ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಈ ಹಂತದಲ್ಲಿ ಮಧ್ಯಪ್ರವೇಶಿಸದಿರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಏಕೆಂದರೆ ಈ ವಿಷಯವು ಸಂವಿಧಾನದ 14 ಮತ್ತು 15 ನೇ ವಿಧಿಗಳು ಹಾಗೂ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಂದ ವಿಧಿಸಲಾದ ನಿರ್ಬಂಧಗಳನ್ನು ಒಳಗೊಂಡಿದೆ” ಎಂದು ಹೇಳಿದ್ದಾರೆ.

ಏನಿದು ಮುಸ್ಲಿಂ ಮೀಸಲು ಮಸೂದೆ?

ನಿಜವಾಗಿಯೂ ಇದು ಮುಸ್ಲಿಂ ಮೀಸಲು ಮಸೂದೆಯಲ್ಲ. ಮಸೂದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಮುಸ್ಲಿಂ ಮೀಸಲು ಮಸೂದೆ ಎನ್ನಲಾಗುತ್ತಿದೆ.

1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತಂದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025ಕ್ಕೆ ವಿಧಾನಮಂಡಲದ ಅನುಮೋದನೆ ಪಡೆಯಲಾಗಿದೆ. ಇದು ರಾಜ್ಯಪಾಲರ ಅಂಕಿತಕ್ಕೆ ಅಥವಾ ರಾಷ್ಟ್ರಪತಿಯ ಪರಿಶೀಲನೆಗೆ ಬಾಕಿಯಿದೆ.

ತಿದ್ದುಪಡಿ ಮಸೂದೆಯಲ್ಲಿ ರೂ. 2 ಕೋಟಿವರೆಗಿನ ಸಿವಿಲ್ ಕೆಲಸಗಳ ಸರ್ಕಾರಿ ಟೆಂಡರ್‌ಗಳಲ್ಲಿ ಮತ್ತು ರೂ. 1 ಕೋಟಿವರೆಗಿನ ಸರಕು/ಸೇವೆಗಳ ಸಂಗ್ರಹಣೆಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4 ಶೇಕಡ ಮೀಸಲಾತಿ ಪರಿಚಯಿಸಲಾಗಿದೆ. ನಿರುದ್ಯೋಗವನ್ನು ಪರಿಹರಿಸುವ ಮತ್ತು ಹಿಂದುಳಿದ ವರ್ಗಗಳ ವರ್ಗ 2ಬಿಯ (ಮುಸ್ಲಿಮರು) ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಬಿಜೆಪಿಯವರು Sorry ಸಾವರ್ಕರ್‌ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...