Homeಕರ್ನಾಟಕಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

- Advertisement -
- Advertisement -

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು.

“ಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಕಳೆದವಾರ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಷ್ಟ್ರಪತಿ ಪರಿಶೀಲನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರನ್ನು ಕೋರಿತ್ತು.

ಎರಡನೇ ಬಾರಿಯೂ ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಮೊದಲ ಬಾರಿ ಕಳುಹಿಸಿದ್ದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನೇ ತಿಳಿಸಿದ್ದಾರೆ. ಅಲ್ಲದೆ, ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ಅಲ್ಲದೆ, “ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ. ಈ ಕಾರಣಕ್ಕೆ ಮಸೂದೆಗೆ ಅಂಕಿತ ಹಾಕದೆ ರಾಷ್ಟ್ರಪತಿಯ ಪರಿಶೀಲನೆಗೆ ಬಿಡಲು ನಿರ್ಧರಿಸಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ತಿರುಗೇಟು ಕೊಟ್ಟ ರಾಜ್ಯಪಾಲರು

ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಬಿಕ್ಕಟ್ಟು ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾದೊಂದಿಗೆ ದ್ವೇಷ ಸಾಧಿಸಿದಂತೆ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಲಯವೇ ನೇರವಾಗಿ ಸುಮಾರು 10 ಮಸೂದೆಗಳನ್ನು ಅಂಗೀಕರಿಸಿತ್ತು.

ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಅತಿ ಮಹತ್ವದ ಈ ತೀರ್ಪನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸಿಎಂಗಳು ಸ್ವಾಗತಿಸಿದ್ದರು. ಈಗ ಅದೇ ತೀರ್ಪಿನ ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರು ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ಯಾರಾಗ್ರಾಫ್ 412 ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು,”ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದಿದ್ದಾರೆ.

ಮುಂದುವರಿದು, “ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿದ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಈ ಹಂತದಲ್ಲಿ ಮಧ್ಯಪ್ರವೇಶಿಸದಿರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಏಕೆಂದರೆ ಈ ವಿಷಯವು ಸಂವಿಧಾನದ 14 ಮತ್ತು 15 ನೇ ವಿಧಿಗಳು ಹಾಗೂ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಂದ ವಿಧಿಸಲಾದ ನಿರ್ಬಂಧಗಳನ್ನು ಒಳಗೊಂಡಿದೆ” ಎಂದು ಹೇಳಿದ್ದಾರೆ.

ಏನಿದು ಮುಸ್ಲಿಂ ಮೀಸಲು ಮಸೂದೆ?

ನಿಜವಾಗಿಯೂ ಇದು ಮುಸ್ಲಿಂ ಮೀಸಲು ಮಸೂದೆಯಲ್ಲ. ಮಸೂದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಮುಸ್ಲಿಂ ಮೀಸಲು ಮಸೂದೆ ಎನ್ನಲಾಗುತ್ತಿದೆ.

1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತಂದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025ಕ್ಕೆ ವಿಧಾನಮಂಡಲದ ಅನುಮೋದನೆ ಪಡೆಯಲಾಗಿದೆ. ಇದು ರಾಜ್ಯಪಾಲರ ಅಂಕಿತಕ್ಕೆ ಅಥವಾ ರಾಷ್ಟ್ರಪತಿಯ ಪರಿಶೀಲನೆಗೆ ಬಾಕಿಯಿದೆ.

ತಿದ್ದುಪಡಿ ಮಸೂದೆಯಲ್ಲಿ ರೂ. 2 ಕೋಟಿವರೆಗಿನ ಸಿವಿಲ್ ಕೆಲಸಗಳ ಸರ್ಕಾರಿ ಟೆಂಡರ್‌ಗಳಲ್ಲಿ ಮತ್ತು ರೂ. 1 ಕೋಟಿವರೆಗಿನ ಸರಕು/ಸೇವೆಗಳ ಸಂಗ್ರಹಣೆಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4 ಶೇಕಡ ಮೀಸಲಾತಿ ಪರಿಚಯಿಸಲಾಗಿದೆ. ನಿರುದ್ಯೋಗವನ್ನು ಪರಿಹರಿಸುವ ಮತ್ತು ಹಿಂದುಳಿದ ವರ್ಗಗಳ ವರ್ಗ 2ಬಿಯ (ಮುಸ್ಲಿಮರು) ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಬಿಜೆಪಿಯವರು Sorry ಸಾವರ್ಕರ್‌ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...