Homeಕರ್ನಾಟಕಬಿಬಿಎಂಪಿಯ 12,692 ಪೌರ ಕಾರ್ಮಿಕರ ನೌಕರಿ ಕಾಯಂ: ಡಿ ದರ್ಜೆ ಸವಲತ್ತು ಕಲ್ಪಿಸಿದ ಸರ್ಕಾರ

ಬಿಬಿಎಂಪಿಯ 12,692 ಪೌರ ಕಾರ್ಮಿಕರ ನೌಕರಿ ಕಾಯಂ: ಡಿ ದರ್ಜೆ ಸವಲತ್ತು ಕಲ್ಪಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ಸರ್ಕಾರ ಕಾರ್ಮಿಕರ ದಿನವಾದ ಮೇ 1ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಸಂಯೋಜಿತವಾಗಿರುವ 12,692 ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿದೆ.

ವಿಶೇಷ ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾದ 12,692 ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಮತ್ತು ನಿರ್ವಾಹಕರನ್ನು ಕಾಯಂಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಲ್ಲಿ ಪೌರಕಾರ್ಮಿಕರನ್ನು ಮಧ್ಯವರ್ತಿಗಳಿಂದ ಮುಕ್ತಗೊಳಿಸಲು, ಅವರ ವೇತನವನ್ನು 7,000 ರೂ.ಗಳಿಂದ 17,000 ರೂ.ಗಳಿಗೆ ಹೆಚ್ಚಿಸಿ, ನೇರ ಬ್ಯಾಂಕ್ ವರ್ಗಾವಣೆಯ ವ್ಯವಸ್ಥೆ ಜಾರಿಗೊಳಿಸಲು ಹೇಗೆ ಶ್ರಮಿಸಿದ್ದರು ಎಂಬುದನ್ನು ಸಿಎಂ ಸಿದ್ದರಾಮಯ್ಯ ಕಾರ್ಮಿಕರ ದಿನಾಚರಣೆಯಲ್ಲಿ  ನೆನಪಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು. ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ಲಾಘಿಸಿದ್ದಾರೆ. “ನೀವು ಬೆಂಗಳೂರಿನ ಸ್ವಚ್ಛತೆಯ ಸೇನಾನಿಗಳು. ನಿಮ್ಮ ಪ್ರಯತ್ನದಿಂದ ಬೆಂಗಳೂರು ಜಾಗತಿಕ ಮೆಚ್ಚುಗೆಯನ್ನು ಗಳಿಸಿದೆ” ಎಂದು ಡಿಕೆಶಿ ಕೊಂಡಾಡಿದ್ದಾರೆ.

ಚುನಾವಣೆಯ ಸಮಯದಲ್ಲಿ ನೀಡಿದ್ದ ಪ್ರಮುಖ ಭರವಸೆಯಾದ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ಇದೇ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪೌರ ಕಾರ್ಮಿಕರನ್ನು ಕಾಯಂಗೊಳಿಸುವಿಕೆ 2013ರಲ್ಲಿ ಪ್ರಾರಂಭವಾದ ದೀರ್ಘ ಪ್ರತಿಭಟನೆಯ ಫಲವಾಗಿದೆ. ಚಂದ್ರಶೇಖರ್ ಸಮಿತಿಯ 2013ರ ಶಿಫಾರಸುಗಳು ಮತ್ತು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಪ್ರಬಲ ಆಗ್ರಹಗಳು ವ್ಯಕ್ತವಾದ ಬಳಿಕ, ಕಾಂಗ್ರೆಸ್ ಸರ್ಕಾರ 2016ರಲ್ಲಿ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸಲು ನಿರ್ಧರಿಸಿತ್ತು. ಆ ನಿರ್ಧಾರವನ್ನು ಈಗ ಭಾಗಶಃ ಜಾರಿಗೆ ತಂದಿದೆ.

2016ಕ್ಕಿಂತ ಮೊದಲು, ಕಸ ಗುಡಿಸುವವರು ಮತ್ತು ತ್ಯಾಜ್ಯ ಸಂಗ್ರಹಕಾರರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಡಬಲ್ ಬಿಲ್ಲಿಂಗ್ ಮತ್ತು ಹಣ ದುರುಪಯೋಗದಂತಹ ಸಮಸ್ಯೆಗಳು ಗುತ್ತಿಗೆ ವ್ಯವಸ್ಥೆಯಲ್ಲಿ ಇತ್ತು. ಬಳಿಕ ಬಿಬಿಎಂಪಿ ಬಯೋಮೆಟ್ರಿಕ್ ದೃಢೀಕರಣವನ್ನು ಪರಿಚಯಿಸಿತು. ಪೌರಕಾರ್ಮಿಕರ ಸಂಖ್ಯೆಯನ್ನು 32,000 ದಿಂದ ಸುಮಾರು 18,000 ಕ್ಕೆ ಇಳಿಸಿತು. ವೇತನ, ಭತ್ಯೆ, ಇಪಿಎಫ್, ಗ್ರಾಚ್ಯುಟಿ ಮತ್ತು ಆರೋಗ್ಯ ವಿಮೆಯಂತಹ ಪ್ರಯೋಜನಗಳ ಅಡಿಯಲ್ಲಿ ಬರುವ ಎಲ್ಲಾ ಹಣವನ್ನು ನೇರ ಪಾವತಿ ವ್ಯವಸ್ಥೆ ಮಾಡಿತು.

₹39,000 ಸಂಬಳ, ₹10ಲಕ್ಷ ಇಡುಗಂಟು, ₹6,000 ಪಿಂಚಣಿ

ಕಾಯಂ ನೇಮಕಾತಿ ಸೌಲಭ್ಯ ಪಡೆದಿರುವ 12,692 ಪೌರ ಕಾರ್ಮಿಕರಿಗೆ ಇನ್ನು ಮುಂದೆ ತಿಂಗಳಿಗೆ ₹ 39,000 ವೇತನ, ನಿವೃತ್ತಿಯ ವೇಳೆ ₹10ಲಕ್ಷ ಇಡುಗಂಟು ಮತ್ತು ₹6,000 ಪಿಂಚಣಿ ಸಿಗಲಿದೆ.

“ಬಿಬಿಎಂಪಿಯ ‘ಡಿ ದರ್ಜೆ’ ನೌಕರರಿಗೆ ಸಿಗುವ ಸಂಬಳ ಮತ್ತು ಇತರ ಎಲ್ಲಾ ಸವಲತ್ತುಗಳು ಪೌರಕಾರ್ಮಿಕರಿಗೂ ಸಿಗಲಿವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...