Homeಕರ್ನಾಟಕಬಿಬಿಎಂಪಿಯ 12,692 ಪೌರ ಕಾರ್ಮಿಕರ ನೌಕರಿ ಕಾಯಂ: ಡಿ ದರ್ಜೆ ಸವಲತ್ತು ಕಲ್ಪಿಸಿದ ಸರ್ಕಾರ

ಬಿಬಿಎಂಪಿಯ 12,692 ಪೌರ ಕಾರ್ಮಿಕರ ನೌಕರಿ ಕಾಯಂ: ಡಿ ದರ್ಜೆ ಸವಲತ್ತು ಕಲ್ಪಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ಸರ್ಕಾರ ಕಾರ್ಮಿಕರ ದಿನವಾದ ಮೇ 1ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಸಂಯೋಜಿತವಾಗಿರುವ 12,692 ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿದೆ.

ವಿಶೇಷ ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾದ 12,692 ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಮತ್ತು ನಿರ್ವಾಹಕರನ್ನು ಕಾಯಂಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಲ್ಲಿ ಪೌರಕಾರ್ಮಿಕರನ್ನು ಮಧ್ಯವರ್ತಿಗಳಿಂದ ಮುಕ್ತಗೊಳಿಸಲು, ಅವರ ವೇತನವನ್ನು 7,000 ರೂ.ಗಳಿಂದ 17,000 ರೂ.ಗಳಿಗೆ ಹೆಚ್ಚಿಸಿ, ನೇರ ಬ್ಯಾಂಕ್ ವರ್ಗಾವಣೆಯ ವ್ಯವಸ್ಥೆ ಜಾರಿಗೊಳಿಸಲು ಹೇಗೆ ಶ್ರಮಿಸಿದ್ದರು ಎಂಬುದನ್ನು ಸಿಎಂ ಸಿದ್ದರಾಮಯ್ಯ ಕಾರ್ಮಿಕರ ದಿನಾಚರಣೆಯಲ್ಲಿ  ನೆನಪಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು. ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ಲಾಘಿಸಿದ್ದಾರೆ. “ನೀವು ಬೆಂಗಳೂರಿನ ಸ್ವಚ್ಛತೆಯ ಸೇನಾನಿಗಳು. ನಿಮ್ಮ ಪ್ರಯತ್ನದಿಂದ ಬೆಂಗಳೂರು ಜಾಗತಿಕ ಮೆಚ್ಚುಗೆಯನ್ನು ಗಳಿಸಿದೆ” ಎಂದು ಡಿಕೆಶಿ ಕೊಂಡಾಡಿದ್ದಾರೆ.

ಚುನಾವಣೆಯ ಸಮಯದಲ್ಲಿ ನೀಡಿದ್ದ ಪ್ರಮುಖ ಭರವಸೆಯಾದ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ಇದೇ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪೌರ ಕಾರ್ಮಿಕರನ್ನು ಕಾಯಂಗೊಳಿಸುವಿಕೆ 2013ರಲ್ಲಿ ಪ್ರಾರಂಭವಾದ ದೀರ್ಘ ಪ್ರತಿಭಟನೆಯ ಫಲವಾಗಿದೆ. ಚಂದ್ರಶೇಖರ್ ಸಮಿತಿಯ 2013ರ ಶಿಫಾರಸುಗಳು ಮತ್ತು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಪ್ರಬಲ ಆಗ್ರಹಗಳು ವ್ಯಕ್ತವಾದ ಬಳಿಕ, ಕಾಂಗ್ರೆಸ್ ಸರ್ಕಾರ 2016ರಲ್ಲಿ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸಲು ನಿರ್ಧರಿಸಿತ್ತು. ಆ ನಿರ್ಧಾರವನ್ನು ಈಗ ಭಾಗಶಃ ಜಾರಿಗೆ ತಂದಿದೆ.

2016ಕ್ಕಿಂತ ಮೊದಲು, ಕಸ ಗುಡಿಸುವವರು ಮತ್ತು ತ್ಯಾಜ್ಯ ಸಂಗ್ರಹಕಾರರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಡಬಲ್ ಬಿಲ್ಲಿಂಗ್ ಮತ್ತು ಹಣ ದುರುಪಯೋಗದಂತಹ ಸಮಸ್ಯೆಗಳು ಗುತ್ತಿಗೆ ವ್ಯವಸ್ಥೆಯಲ್ಲಿ ಇತ್ತು. ಬಳಿಕ ಬಿಬಿಎಂಪಿ ಬಯೋಮೆಟ್ರಿಕ್ ದೃಢೀಕರಣವನ್ನು ಪರಿಚಯಿಸಿತು. ಪೌರಕಾರ್ಮಿಕರ ಸಂಖ್ಯೆಯನ್ನು 32,000 ದಿಂದ ಸುಮಾರು 18,000 ಕ್ಕೆ ಇಳಿಸಿತು. ವೇತನ, ಭತ್ಯೆ, ಇಪಿಎಫ್, ಗ್ರಾಚ್ಯುಟಿ ಮತ್ತು ಆರೋಗ್ಯ ವಿಮೆಯಂತಹ ಪ್ರಯೋಜನಗಳ ಅಡಿಯಲ್ಲಿ ಬರುವ ಎಲ್ಲಾ ಹಣವನ್ನು ನೇರ ಪಾವತಿ ವ್ಯವಸ್ಥೆ ಮಾಡಿತು.

₹39,000 ಸಂಬಳ, ₹10ಲಕ್ಷ ಇಡುಗಂಟು, ₹6,000 ಪಿಂಚಣಿ

ಕಾಯಂ ನೇಮಕಾತಿ ಸೌಲಭ್ಯ ಪಡೆದಿರುವ 12,692 ಪೌರ ಕಾರ್ಮಿಕರಿಗೆ ಇನ್ನು ಮುಂದೆ ತಿಂಗಳಿಗೆ ₹ 39,000 ವೇತನ, ನಿವೃತ್ತಿಯ ವೇಳೆ ₹10ಲಕ್ಷ ಇಡುಗಂಟು ಮತ್ತು ₹6,000 ಪಿಂಚಣಿ ಸಿಗಲಿದೆ.

“ಬಿಬಿಎಂಪಿಯ ‘ಡಿ ದರ್ಜೆ’ ನೌಕರರಿಗೆ ಸಿಗುವ ಸಂಬಳ ಮತ್ತು ಇತರ ಎಲ್ಲಾ ಸವಲತ್ತುಗಳು ಪೌರಕಾರ್ಮಿಕರಿಗೂ ಸಿಗಲಿವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...