Homeಮುಖಪುಟಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -
- Advertisement -

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಹಿಂದೂ ಮತ ಬ್ಯಾಂಕ್ ಸೆಳೆಯುವ ಹುನ್ನಾರ ಎಂದು ಟೀಕಿಸಿದೆ. ಬಿಜೆಪಿಯ ಇಬ್ಬಂದಿತನದ ಕುರಿತು ಚರ್ಚೆಯಾಗಬೇಕು ಎಂದಿದೆ.

2009ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಅನ್ವಯ ಅನಧಿಕೃತ ದೇವಾಲಯಗಳನ್ನು ತೆರವು ಮಾಡಬೇಕಿದೆ. ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿನ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸಲಾಗುವುದು. ಆದರೆ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಇನ್ನು ಮುಂದೆ ನಿರ್ಮಿಸುವಂತಿಲ್ಲ ಎಂದು ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಮಸೂದೆ 2021′ ಹೇಳಿದೆ. ಕೋರ್ಟ್‌ ತೀರ್ಪು ಬಳಿಕ ಈಗ ಸರ್ಕಾರವು “ಸರ್ಕಾರದ ನಿಯಮಗಳಿಗೆ ಅನುಸಾರ ಇರುವ ಧಾರ್ಮಿಕ ಕಟ್ಟಡಗಳಿದ್ದರೆ ಅವುಗಳನ್ನು ತೆರವುಗೊಳಿಸಬಾರದು. ಸರ್ಕಾರದ ನಿಯಮಗಳಿಗೆ ಒಳಪಡದ ಧಾರ್ಮಿಕ ಕಟ್ಟಡಗಳನ್ನು ತೆರೆವು ಮಾಡಬಹುದು” ಎಂದು ಹೊಸ ಮಸೂದೆಯಲ್ಲಿ ಹೇಳಿದೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್‌, “ಇದು ಬಿಜೆಪಿಯ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗ. ದೇವಾಲಯವನ್ನು ಉರುಳಿಸುವವರು ಇವರೇ, ಅವುಗಳನ್ನು ರಕ್ಷಿಸುವವರು ಇವರೇ. ಇದು ಮತಬ್ಯಾಂಕ್‌ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಈ ವಿಚಾರ ಕುರಿತು ಚರ್ಚೆ ನಡೆಯಬೇಕು” ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂಜನಗೂಡಿನ ದೇವಾಲಯ ನೆಮಸಮವಾಗುತ್ತಿದ್ದಂತೆ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ಹಿಂದೂ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗವಾಗಿರುವ ಸಂಘಟನೆಗಳು ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. “ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಈ ಪ್ರಕರಣ ಬೇರೆಯೇ ಸ್ವರೂಪ ಪಡೆಯುತ್ತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಒಂದು ವಿಚಾರವಾಗಿ ಮಾತನಾಡುತ್ತಾ ಬೆಂಕಿ ಹಚ್ಚುವ ಮಾತನಾಡಿದ್ದರು. ಇಂದು ಏನಾದರೂ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಅದು ಅಕ್ಷರಶಃ ಆಗುತ್ತಿತ್ತು” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧಮೇಂದ್ರ ಹೇಳಿಕೆ ನೀಡಿದ್ದರು. ಅಲ್ಲದೇ ಗಾಂಧಿಯನ್ನೇ ಬಿಟ್ಟಿಲ್ಲ ನಾವು, ಇನ್ನು ನೀವು ಯಾವ ಲೆಕ್ಕ ಎಂದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದರಿಂದ ಧರ್ಮಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು- ಕೊಡಗು ಲೋಕಸಭಾ ಸಂಸದ ಪ್ರತಾಪ್‌ ಸಿಂಹ, ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ, ಮೈಸೂರು ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡಿದ್ದರು. ಹಿಂದೂ ದೇವಾಲಯಗಳ ತೆರವು ಮಾಡಬಾರದು ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಬಿಜೆಪಿ ಇತರ ನಾಯಕರು ದೇವಾಲಯ ತೆರವು ವಿರೋಧಿಸಿದ್ದರು. ಹಿಂದೂ ಮತಬ್ಯಾಂಕ್‌ ರಾಜಕಾರಣ ಮಾಡುವ ಬಿಜೆಪಿ, ಹಿಂದೂಗಳ ದೇವಾಲಯಗಳನ್ನು ತೆರವು ಮಾಡುತ್ತಿದೆ ಎಂದು ಪ್ರತಿಪಕ್ಷಗಳೂ ಟೀಕಿಸಿದ್ದವು.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಮುಖ್ಯಮಂತ್ರಿಯವರು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ತನ್ನ ಹಿಂದೂ ಮತ ಬ್ಯಾಂಕ್ ಸಿಡಿದೆದ್ದಿದ್ದನ್ನು ಗಮನಿಸಿದ ಸರ್ಕಾರ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಮಂಡಿಸಿದೆ. ಈ ಕುರಿತು ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ದೇವಾಲಯಗಳನ್ನು ಒಡೆಯಬೇಕು ಎಂಬ ನಿರ್ಧಾರವನ್ನು ಸರ್ಕಾರ ಈ ಹಿಂದೆ ಎಂದೂ ತೆಗೆದುಕೊಂಡಿಲ್ಲ. ಈಗಲೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಿರುವ ಹಿಂದೂ ಮತಗಳ ಧ್ರುವೀಕರಣ ಹೇಗೆ ಸಾಧ್ಯವಾಗುತ್ತದೆ?” ಎಂದು ಕೇಳುತ್ತಾರೆ.

“ಅನೇಕ ಘಟನೆಗಳು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಹೀಗಾಗಿ ನಂಜನಗೂಡಿನ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆದದ್ದು ಹೇಗೆ ಎಂಬುದು ತನಿಖೆಯಾಗಬೇಕು. ಸರ್ಕಾರ ಮಂಡಿಸಿರುವ ಹೊಸ ಮಸೂದೆಯಲ್ಲಿ ಮಂದಿರ, ಮಸೀದಿ, ಚರ್ಚ್‌ ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆ ಇದೆ. ಹೀಗಾಗಿ ಎಲ್ಲ ಪಕ್ಷಗಳೂ ಸುಮ್ಮನಾಗಿವೆ” ಎನ್ನುತ್ತಾರೆ ರವಿಕುಮಾರ್‌.

ಈ ವಿಚಾರದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟವಾಗಿ ಮಾತನಾಡಿದ್ದಾರೆ. ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ಸ್ಥಳೀಯ ಜನರೊಂದಿಗೆ ಮಾತನಾಡಬೇಕು. ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಬೇಕು ಎಂದಿದ್ದಾರೆ. ಜನರು ಮತ್ತೊಂದು ದೇವಾಲಯ ಕಟ್ಟಬೇಕೆಂದು ಬಯಸಿದರೆ, ಅದಕ್ಕೆ ಅವಕಾಶ ನೀಡಬೇಕು ಅಲ್ಲವೇ? ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಅದು ಚರ್ಚೆ ಆಗಬೇಕಿದೆ” ಎಂದರು.

ಹಿಂದೂ ಮತಗಳ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಭಾವನಾತ್ಮಕ ವಿಚಾರಗಳಲ್ಲಿ ಯಾವುದೇ ಪಕ್ಷವೂ ವೈಚಾರಿಕ ನಿಲುವು ತಾಳುವುದು ಕಷ್ಟ. ನ್ಯಾಯಾಂಗದ ನಿಲುವನ್ನು ಸಮರ್ಥಿಸುವುದು ಆಡಳಿತ ಹಾಗೂ ವಿರೋಧ ಪಕ್ಷಗಳೆರಡಕ್ಕೂ ಕಷ್ಟವಾಗುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....