Homeಮುಖಪುಟಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -
- Advertisement -

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಹಿಂದೂ ಮತ ಬ್ಯಾಂಕ್ ಸೆಳೆಯುವ ಹುನ್ನಾರ ಎಂದು ಟೀಕಿಸಿದೆ. ಬಿಜೆಪಿಯ ಇಬ್ಬಂದಿತನದ ಕುರಿತು ಚರ್ಚೆಯಾಗಬೇಕು ಎಂದಿದೆ.

2009ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಅನ್ವಯ ಅನಧಿಕೃತ ದೇವಾಲಯಗಳನ್ನು ತೆರವು ಮಾಡಬೇಕಿದೆ. ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿನ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸಲಾಗುವುದು. ಆದರೆ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಇನ್ನು ಮುಂದೆ ನಿರ್ಮಿಸುವಂತಿಲ್ಲ ಎಂದು ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಮಸೂದೆ 2021′ ಹೇಳಿದೆ. ಕೋರ್ಟ್‌ ತೀರ್ಪು ಬಳಿಕ ಈಗ ಸರ್ಕಾರವು “ಸರ್ಕಾರದ ನಿಯಮಗಳಿಗೆ ಅನುಸಾರ ಇರುವ ಧಾರ್ಮಿಕ ಕಟ್ಟಡಗಳಿದ್ದರೆ ಅವುಗಳನ್ನು ತೆರವುಗೊಳಿಸಬಾರದು. ಸರ್ಕಾರದ ನಿಯಮಗಳಿಗೆ ಒಳಪಡದ ಧಾರ್ಮಿಕ ಕಟ್ಟಡಗಳನ್ನು ತೆರೆವು ಮಾಡಬಹುದು” ಎಂದು ಹೊಸ ಮಸೂದೆಯಲ್ಲಿ ಹೇಳಿದೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್‌, “ಇದು ಬಿಜೆಪಿಯ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗ. ದೇವಾಲಯವನ್ನು ಉರುಳಿಸುವವರು ಇವರೇ, ಅವುಗಳನ್ನು ರಕ್ಷಿಸುವವರು ಇವರೇ. ಇದು ಮತಬ್ಯಾಂಕ್‌ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಈ ವಿಚಾರ ಕುರಿತು ಚರ್ಚೆ ನಡೆಯಬೇಕು” ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂಜನಗೂಡಿನ ದೇವಾಲಯ ನೆಮಸಮವಾಗುತ್ತಿದ್ದಂತೆ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ಹಿಂದೂ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗವಾಗಿರುವ ಸಂಘಟನೆಗಳು ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. “ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಈ ಪ್ರಕರಣ ಬೇರೆಯೇ ಸ್ವರೂಪ ಪಡೆಯುತ್ತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಒಂದು ವಿಚಾರವಾಗಿ ಮಾತನಾಡುತ್ತಾ ಬೆಂಕಿ ಹಚ್ಚುವ ಮಾತನಾಡಿದ್ದರು. ಇಂದು ಏನಾದರೂ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಅದು ಅಕ್ಷರಶಃ ಆಗುತ್ತಿತ್ತು” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧಮೇಂದ್ರ ಹೇಳಿಕೆ ನೀಡಿದ್ದರು. ಅಲ್ಲದೇ ಗಾಂಧಿಯನ್ನೇ ಬಿಟ್ಟಿಲ್ಲ ನಾವು, ಇನ್ನು ನೀವು ಯಾವ ಲೆಕ್ಕ ಎಂದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದರಿಂದ ಧರ್ಮಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು- ಕೊಡಗು ಲೋಕಸಭಾ ಸಂಸದ ಪ್ರತಾಪ್‌ ಸಿಂಹ, ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ, ಮೈಸೂರು ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡಿದ್ದರು. ಹಿಂದೂ ದೇವಾಲಯಗಳ ತೆರವು ಮಾಡಬಾರದು ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಬಿಜೆಪಿ ಇತರ ನಾಯಕರು ದೇವಾಲಯ ತೆರವು ವಿರೋಧಿಸಿದ್ದರು. ಹಿಂದೂ ಮತಬ್ಯಾಂಕ್‌ ರಾಜಕಾರಣ ಮಾಡುವ ಬಿಜೆಪಿ, ಹಿಂದೂಗಳ ದೇವಾಲಯಗಳನ್ನು ತೆರವು ಮಾಡುತ್ತಿದೆ ಎಂದು ಪ್ರತಿಪಕ್ಷಗಳೂ ಟೀಕಿಸಿದ್ದವು.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಮುಖ್ಯಮಂತ್ರಿಯವರು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ತನ್ನ ಹಿಂದೂ ಮತ ಬ್ಯಾಂಕ್ ಸಿಡಿದೆದ್ದಿದ್ದನ್ನು ಗಮನಿಸಿದ ಸರ್ಕಾರ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಮಂಡಿಸಿದೆ. ಈ ಕುರಿತು ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ದೇವಾಲಯಗಳನ್ನು ಒಡೆಯಬೇಕು ಎಂಬ ನಿರ್ಧಾರವನ್ನು ಸರ್ಕಾರ ಈ ಹಿಂದೆ ಎಂದೂ ತೆಗೆದುಕೊಂಡಿಲ್ಲ. ಈಗಲೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಿರುವ ಹಿಂದೂ ಮತಗಳ ಧ್ರುವೀಕರಣ ಹೇಗೆ ಸಾಧ್ಯವಾಗುತ್ತದೆ?” ಎಂದು ಕೇಳುತ್ತಾರೆ.

“ಅನೇಕ ಘಟನೆಗಳು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಹೀಗಾಗಿ ನಂಜನಗೂಡಿನ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆದದ್ದು ಹೇಗೆ ಎಂಬುದು ತನಿಖೆಯಾಗಬೇಕು. ಸರ್ಕಾರ ಮಂಡಿಸಿರುವ ಹೊಸ ಮಸೂದೆಯಲ್ಲಿ ಮಂದಿರ, ಮಸೀದಿ, ಚರ್ಚ್‌ ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆ ಇದೆ. ಹೀಗಾಗಿ ಎಲ್ಲ ಪಕ್ಷಗಳೂ ಸುಮ್ಮನಾಗಿವೆ” ಎನ್ನುತ್ತಾರೆ ರವಿಕುಮಾರ್‌.

ಈ ವಿಚಾರದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟವಾಗಿ ಮಾತನಾಡಿದ್ದಾರೆ. ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ಸ್ಥಳೀಯ ಜನರೊಂದಿಗೆ ಮಾತನಾಡಬೇಕು. ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಬೇಕು ಎಂದಿದ್ದಾರೆ. ಜನರು ಮತ್ತೊಂದು ದೇವಾಲಯ ಕಟ್ಟಬೇಕೆಂದು ಬಯಸಿದರೆ, ಅದಕ್ಕೆ ಅವಕಾಶ ನೀಡಬೇಕು ಅಲ್ಲವೇ? ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಅದು ಚರ್ಚೆ ಆಗಬೇಕಿದೆ” ಎಂದರು.

ಹಿಂದೂ ಮತಗಳ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಭಾವನಾತ್ಮಕ ವಿಚಾರಗಳಲ್ಲಿ ಯಾವುದೇ ಪಕ್ಷವೂ ವೈಚಾರಿಕ ನಿಲುವು ತಾಳುವುದು ಕಷ್ಟ. ನ್ಯಾಯಾಂಗದ ನಿಲುವನ್ನು ಸಮರ್ಥಿಸುವುದು ಆಡಳಿತ ಹಾಗೂ ವಿರೋಧ ಪಕ್ಷಗಳೆರಡಕ್ಕೂ ಕಷ್ಟವಾಗುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...