Homeಮುಖಪುಟಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -
- Advertisement -

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಹಿಂದೂ ಮತ ಬ್ಯಾಂಕ್ ಸೆಳೆಯುವ ಹುನ್ನಾರ ಎಂದು ಟೀಕಿಸಿದೆ. ಬಿಜೆಪಿಯ ಇಬ್ಬಂದಿತನದ ಕುರಿತು ಚರ್ಚೆಯಾಗಬೇಕು ಎಂದಿದೆ.

2009ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಅನ್ವಯ ಅನಧಿಕೃತ ದೇವಾಲಯಗಳನ್ನು ತೆರವು ಮಾಡಬೇಕಿದೆ. ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿನ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸಲಾಗುವುದು. ಆದರೆ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಇನ್ನು ಮುಂದೆ ನಿರ್ಮಿಸುವಂತಿಲ್ಲ ಎಂದು ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಮಸೂದೆ 2021′ ಹೇಳಿದೆ. ಕೋರ್ಟ್‌ ತೀರ್ಪು ಬಳಿಕ ಈಗ ಸರ್ಕಾರವು “ಸರ್ಕಾರದ ನಿಯಮಗಳಿಗೆ ಅನುಸಾರ ಇರುವ ಧಾರ್ಮಿಕ ಕಟ್ಟಡಗಳಿದ್ದರೆ ಅವುಗಳನ್ನು ತೆರವುಗೊಳಿಸಬಾರದು. ಸರ್ಕಾರದ ನಿಯಮಗಳಿಗೆ ಒಳಪಡದ ಧಾರ್ಮಿಕ ಕಟ್ಟಡಗಳನ್ನು ತೆರೆವು ಮಾಡಬಹುದು” ಎಂದು ಹೊಸ ಮಸೂದೆಯಲ್ಲಿ ಹೇಳಿದೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್‌, “ಇದು ಬಿಜೆಪಿಯ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗ. ದೇವಾಲಯವನ್ನು ಉರುಳಿಸುವವರು ಇವರೇ, ಅವುಗಳನ್ನು ರಕ್ಷಿಸುವವರು ಇವರೇ. ಇದು ಮತಬ್ಯಾಂಕ್‌ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಈ ವಿಚಾರ ಕುರಿತು ಚರ್ಚೆ ನಡೆಯಬೇಕು” ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂಜನಗೂಡಿನ ದೇವಾಲಯ ನೆಮಸಮವಾಗುತ್ತಿದ್ದಂತೆ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ಹಿಂದೂ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗವಾಗಿರುವ ಸಂಘಟನೆಗಳು ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. “ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಈ ಪ್ರಕರಣ ಬೇರೆಯೇ ಸ್ವರೂಪ ಪಡೆಯುತ್ತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಒಂದು ವಿಚಾರವಾಗಿ ಮಾತನಾಡುತ್ತಾ ಬೆಂಕಿ ಹಚ್ಚುವ ಮಾತನಾಡಿದ್ದರು. ಇಂದು ಏನಾದರೂ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಅದು ಅಕ್ಷರಶಃ ಆಗುತ್ತಿತ್ತು” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧಮೇಂದ್ರ ಹೇಳಿಕೆ ನೀಡಿದ್ದರು. ಅಲ್ಲದೇ ಗಾಂಧಿಯನ್ನೇ ಬಿಟ್ಟಿಲ್ಲ ನಾವು, ಇನ್ನು ನೀವು ಯಾವ ಲೆಕ್ಕ ಎಂದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದರಿಂದ ಧರ್ಮಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು- ಕೊಡಗು ಲೋಕಸಭಾ ಸಂಸದ ಪ್ರತಾಪ್‌ ಸಿಂಹ, ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ, ಮೈಸೂರು ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡಿದ್ದರು. ಹಿಂದೂ ದೇವಾಲಯಗಳ ತೆರವು ಮಾಡಬಾರದು ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಬಿಜೆಪಿ ಇತರ ನಾಯಕರು ದೇವಾಲಯ ತೆರವು ವಿರೋಧಿಸಿದ್ದರು. ಹಿಂದೂ ಮತಬ್ಯಾಂಕ್‌ ರಾಜಕಾರಣ ಮಾಡುವ ಬಿಜೆಪಿ, ಹಿಂದೂಗಳ ದೇವಾಲಯಗಳನ್ನು ತೆರವು ಮಾಡುತ್ತಿದೆ ಎಂದು ಪ್ರತಿಪಕ್ಷಗಳೂ ಟೀಕಿಸಿದ್ದವು.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಮುಖ್ಯಮಂತ್ರಿಯವರು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ತನ್ನ ಹಿಂದೂ ಮತ ಬ್ಯಾಂಕ್ ಸಿಡಿದೆದ್ದಿದ್ದನ್ನು ಗಮನಿಸಿದ ಸರ್ಕಾರ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಮಂಡಿಸಿದೆ. ಈ ಕುರಿತು ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ದೇವಾಲಯಗಳನ್ನು ಒಡೆಯಬೇಕು ಎಂಬ ನಿರ್ಧಾರವನ್ನು ಸರ್ಕಾರ ಈ ಹಿಂದೆ ಎಂದೂ ತೆಗೆದುಕೊಂಡಿಲ್ಲ. ಈಗಲೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಿರುವ ಹಿಂದೂ ಮತಗಳ ಧ್ರುವೀಕರಣ ಹೇಗೆ ಸಾಧ್ಯವಾಗುತ್ತದೆ?” ಎಂದು ಕೇಳುತ್ತಾರೆ.

“ಅನೇಕ ಘಟನೆಗಳು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಹೀಗಾಗಿ ನಂಜನಗೂಡಿನ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆದದ್ದು ಹೇಗೆ ಎಂಬುದು ತನಿಖೆಯಾಗಬೇಕು. ಸರ್ಕಾರ ಮಂಡಿಸಿರುವ ಹೊಸ ಮಸೂದೆಯಲ್ಲಿ ಮಂದಿರ, ಮಸೀದಿ, ಚರ್ಚ್‌ ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆ ಇದೆ. ಹೀಗಾಗಿ ಎಲ್ಲ ಪಕ್ಷಗಳೂ ಸುಮ್ಮನಾಗಿವೆ” ಎನ್ನುತ್ತಾರೆ ರವಿಕುಮಾರ್‌.

ಈ ವಿಚಾರದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟವಾಗಿ ಮಾತನಾಡಿದ್ದಾರೆ. ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ಸ್ಥಳೀಯ ಜನರೊಂದಿಗೆ ಮಾತನಾಡಬೇಕು. ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಬೇಕು ಎಂದಿದ್ದಾರೆ. ಜನರು ಮತ್ತೊಂದು ದೇವಾಲಯ ಕಟ್ಟಬೇಕೆಂದು ಬಯಸಿದರೆ, ಅದಕ್ಕೆ ಅವಕಾಶ ನೀಡಬೇಕು ಅಲ್ಲವೇ? ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಅದು ಚರ್ಚೆ ಆಗಬೇಕಿದೆ” ಎಂದರು.

ಹಿಂದೂ ಮತಗಳ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಭಾವನಾತ್ಮಕ ವಿಚಾರಗಳಲ್ಲಿ ಯಾವುದೇ ಪಕ್ಷವೂ ವೈಚಾರಿಕ ನಿಲುವು ತಾಳುವುದು ಕಷ್ಟ. ನ್ಯಾಯಾಂಗದ ನಿಲುವನ್ನು ಸಮರ್ಥಿಸುವುದು ಆಡಳಿತ ಹಾಗೂ ವಿರೋಧ ಪಕ್ಷಗಳೆರಡಕ್ಕೂ ಕಷ್ಟವಾಗುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...