Homeಕರ್ನಾಟಕಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

- Advertisement -
- Advertisement -

ಕರ್ನಾಟಕ ಸರ್ಕಾರ ಈ ಶ್ರಾವಣದ ಒಂದು ಮಂಗಳವಾರ ಒಂದು ವಿಚಿತ್ರವಾದ ಆದೇಶವನ್ನು ಹೊರಡಿಸಿತು. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಯಾವುದೇ  ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ನೆನಪಿನ ಕಾಣಿಕೆ ನೀಡಬಾರದಾಗಿ, ಅದರ ಬದಲಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದೆಂದು ಮತ್ತು ಇದನ್ನು ಬಹಳ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆ ಆದೇಶ ಆಗ್ರಹಿಸಿದೆ. ಇದರಿಂದ ಹೂ ಮತ್ತು ಹಣ್ಣು ಬೆಳೆಗಾರರು ಹಾಗೂ ಮಾರಾಟಗಾರರಿಗೆ ಸಮಸ್ಯೆ ಆಗುವುದೆಂಬ ಆತಂಕ- ಆಕ್ರೋಶ ಕೂಡ ವ್ಯಕ್ತವಾಗಿದೆ. ಅದರ ಬಗ್ಗೆ ಸರ್ಕಾರ ಗಮನಹರಿಸಿ ಸರಿಪಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂಬು ನಮ್ಮ ಆಶಯವೂ ಕೂಡ.

ಆದರೆ ಈ ಸಮಯದಲ್ಲಿ ಶಾಸಕರಿಗೆ-ಸಚಿವರಿಗೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ನೀಡಲು ಪುಸ್ತಕಗಳನ್ನು ಆಯ್ದು ಕೊಂಡುಕೊಳ್ಳಲು ರಾಜ್ಯಾದ್ಯಂತ ಪುಸ್ತಕದ ಅಂಗಡಿಗಳಿಗೆ ಭಾರಿ ಸಂಖ್ಯೆಯಲ್ಲಿ, ನೂಕುನುಗ್ಗಲಿನಲ್ಲಿ ಜನ ಹೋಗುತ್ತಿದ್ದಾರೆ ಎಂಬ ಅನಧಿಕೃತ ವರದಿಗಳು ಇವೆ. ಅದರ ಸತ್ಯಾಸತ್ಯತೆ ಏನೇ ಇರಲಿ, ಉಡುಗೊರೆ ತರಲು ಪುಸ್ತಕ ಅಂಗಡಿಗೆ ಹೋದವನಿಗೆ ಏನು ಕೊಳ್ಳಬೇಕು ಎಂಬ ಗೊಂದಲ ಮೂಡುವುದು ಸರ್ವೇ ಸಾಮಾನ್ಯ. ಮತ್ತು ಈ ಕಾಲಘಟ್ಟದಲ್ಲಿ ಶಾಸಕರು-ಸಚಿವರು ಆರೋಗ್ಯಕರವಾದದ್ದನ್ನೇ ಓದಬೇಕು ಎಂಬ ಕಾಳಜಿ ಎಲ್ಲರಿಗೂ ಇದ್ದೇ ಇರುತ್ತದಲ್ಲವೇ! ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯದ ಪುಸ್ತಕಗಳ ಬಗ್ಗೆ ಮಾತಾಡ್ತಾ ಇದ್ದೀನಿ ಅಂದುಕೊಳ್ಳಬೇಡಿ. ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವ ಪುಸ್ತಕಗಳನ್ನು ಜನಪ್ರತಿನಿಧಿಗಳು ಓದುವುದು ಅತಿ ಮುಖ್ಯ. ಆ ನಿಟ್ಟಿನಲ್ಲಿ ಉಡುಗೊರೆ ಹುಡುಕಲು ಸಮಸ್ತ ಜನತೆಗೆ ಉಪಯೋಗವಾಗಲಿ ಎಂಬ ದೃಷ್ಟಿಯಿಂದ ಸಲಹೆಗಳನ್ನು ಹಲವು ಕಂತುಗಳಲ್ಲಿ ಇಲ್ಲಿ ನೀಡಲಾಗುವುದು. ಸಾಮಾನ್ಯವಾಗಿ ಯಾರಿಗಾದರೂ ಕೊಡಬಹುದಾದ ಪುಸ್ತಕಗಳ ಸಲಹೆಗಳ ಜೊತೆಗೆ ನಿರ್ದಿಷ್ಟವಾಗಿ ಕೆಲವು ಶಾಸಕರಿಗೆ, ಸಚಿವರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಉಡುಗೊರೆ ನೀಡುವಾಗ ಯಾವ ಪುಸ್ತಕ ನೀಡಿದರೆ ಒಳ್ಳೆಯದು ಎಂಬುದರ ಬಗ್ಗೆಯೂ ಇಲ್ಲಿ ವಿವರಣೆ ಇರಲಿದೆ. ನೀವೂ ಕಮೆಂಟ್ ಬಾಕ್ಸ್ ನಲ್ಲಿ ನಿಮ್ಮ ಸಜೆಶನ್‌ಗಳನ್ನ ಹಾಕುವುದಕ್ಕೆ ಮರೆಯಬೇಡಿ!

ಸಾಮಾನ್ಯವಾಗಿ ಯಾರಿಗೂ ಕೊಡಬಹುದಾದ ಪುಸ್ತಕ ಉಡುಗೊರೆಗಳು!

  1. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು

ಇವತ್ತು ಎಲ್ಲಾ ಜನಪ್ರತಿನಿಧಿಗಳು ಓದಲೇಬೇಕಾದದ್ದು ಎಂದರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಸಮಗ್ರ ಬರಹಗಳನ್ನು. ಭಾರತಕ್ಕೆ ಪ್ರಜಾಪ್ರಭುತ್ವದ ಅಗತ್ಯ ಏಕಿದೆ ಎಂಬುದರಿಂದ ಹಿಡಿದು, ಹಿಂದೂ ಧರ್ಮದಲ್ಲಿ ಅಡಗಿರುವ ಅಪಸವ್ಯಗಳು, ಸಂವಿಧಾನದ ಬಗ್ಗೆ, ಬೌದ್ಧ ಧರ್ಮದ ಬಗ್ಗೆ, ಭಾರತದ ಇತಿಹಾಸದ ಸಂಗತಿಗಳ ಬಗ್ಗೆ – ಒಟ್ಟಿನಲ್ಲಿ ಭಾರತೀಯ ಸಮಾಜ ಆರೋಗ್ಯಪೂರ್ಣವಾಗಿ ಮುನ್ನಡೆಯಲು ಬೇಕಿರುವ ಎಲ್ಲಾ ಸಂಗತಿಗಳು ಇದರಲ್ಲಿ ಅಡಕವಾಗಿವೆ. ಕುವೆಂಪು ಭಾಷಾ ಪ್ರಾಧಿಕಾರ ಇದನ್ನು ಪ್ರಕಟಿಸಿದ್ದು ಈಗ ಪ್ರತಿಗಳ ಲಭ್ಯತೆ ಬಗ್ಗೆ ಗೊಂದಲಗಳಿವೆ. ಶೀಘ್ರದಲ್ಲಿಯೇ ಮರುಮುದ್ರಣ ಮಾಡುವಂತೆ ಒತ್ತಡ ಹಾಕಬೇಕಿದೆ.

  1. ಆತ್ಮಕತೆ ಅಥವಾ ನನ್ನ ಸತ್ಯಾನ್ವೇಷಣೆ

ಸ್ವಾತಂತ್ರ್ಯ ದಿನಾಚರಣೆ ಬೇರೆ ಹತ್ತಿರ ಬರುತ್ತಿದೆ. ರಾಜಕಾರಣಿಗಳು, ಶಾಸಕರು ಸ್ವಾತಂತ್ರ್ಯದ ಬಗ್ಗೆ, ಅದಕ್ಕೆ ಮಹಾತ್ಮ ಗಾಂಧಿಯವರು ನೀಡಿದ ಕೊಡುಗೆ ಬಗ್ಗೆ ಬಹಳಷ್ಟು ಮಾತನಾಡಲಿದ್ದಾರೆ. ಅವರು ಮಹಾತ್ಮ ಗಾಂಧೀಜಿಯ ಬಗ್ಗೆ ಇನ್ನಷ್ಟು ಓದಿಕೊಳ್ಳಲಿ. ಗಾಂಧಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮು ಸೌಹಾರ್ದಕ್ಕೆ ಯಾಕಷ್ಟು ಶ್ರಮಿಸಿದರು ಎಂಬುದನ್ನು ಹೆಚ್ಚು ಅರ್ಥ ಮಾಡಿಕೊಳ್ಳಲಿ. ಈ ದೃಷ್ಟಿಯಿಂದ ಗಾಂಧಿಯವರ ಆತ್ಮಕತೆಯನ್ನು ಅಗತ್ಯವಾಗಿ ಗಿಫ್ಟ್ ಕೊಡಿ. ಕನ್ನಡಕ್ಕೆ ಹಲವು ಬಾರಿ ಗಾಂಧಿ ಆತ್ಮಕತೆ ಅನುವಾದವಾಗಿದ್ದರೂ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಅನುವಾದಿಸಿರುವ ಆವೃತ್ತಿ ಬಹಳ ಜನಪ್ರಿವಾಗಿದ್ದು, ಸುಲಭವಾಗಿ ಪುಸ್ತಕದ ಅಂಗಡಿಗಳಲ್ಲಿ ಲಭ್ಯವಿದೆ.

  1. ಭಾರತ ದರ್ಶನ

ಮೊನ್ನೆ ಮೊನ್ನೆ ಬಿಜೆಪಿ ಶಾಸಕರಾದ ಸಿ ಟಿ ರವಿಯವರು ಭಾರತದ ಪ್ರಥಮ ಮುಖ್ಯಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜವಾಹರ್ ಲಾಲ್ ನೆಹರು ಅವರ ಬಗೆಗಿನ ತಮ್ಮ ಅನುಚಿತ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇನ್ನು ಪೋಸ್ಟ್ ಕಾರ್ಡ್ ನಂತಹ ಸುಳ್ಳುಸುದ್ದಿ ಹರಡುವ ತಾಣಗಳಿಗೆ ನೆಹರೂ ಬಗೆಗೆ ಫೇಕ್ ಸುದ್ದಿಗಳನ್ನು ಸೃಷ್ಟಿ ಮಾಡಿ ಹಂಚುವ ಕೆಲಸ ಅಚ್ಚುಮೆಚ್ಚು. ಜನಪ್ರತಿನಿಧಿಗಳು ಸುಳ್ಳು ಸುದ್ದಿಯಿಂದ ಪ್ರೇರೇಪಿತರಾಗಬಾರದಲ್ಲವೇ? ಅದಕ್ಕೆ ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ದ ಅನುವಾದ ‘ಭಾರತ ದರ್ಶನ’ವನ್ನು ಅಗತ್ಯವಾಗಿ ಉಡುಗೊರೆ ನೀಡಿ. ಮುಂದಿನ ಬಾರಿ ಸಿಕ್ಕಾಗ ‘ಓದಿ ಮುಗಿಸಿದ್ರಾ’ ಅಂತ ಕೇಳುವುದನ್ನು ಮಾತ್ರ ಮರೆಯಬೇಡಿ!

  1. ಬಸವಣ್ಣನವರ ವಚನಗಳು

ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ವೈದಿಕ ಧರ್ಮದ ವಿರುದ್ಧ ಆದ ಶರಣ ಕ್ರಾಂತಿಯನ್ನು ಇಂದಿನ ಜನಪ್ರತಿನಿಧಿಗಳು ತಿಳಿದುಕೊಳ್ಳುವುದು ಅತಿ ಮುಖ್ಯ ಸಂಗತಿ. ಅಂದಿನ ಅನುಭವ ಮಂಟಪ ಜಗತ್ತಿನ ಮೊದಲ ಪ್ರಜಾಸತ್ತೀಯವಾದ ವ್ಯವಸ್ಥೆಯಾಗಿತ್ತು ಅನ್ನುತ್ತಾರೆ. ಈ ನಿಟ್ಟಿನಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವುದಕ್ಕೆ ಪ್ರಾಥಮಿಕವಾಗಿ ಬಸವಣ್ಣನವರ ವಚನಗಳನ್ನು ಓದುವುದು ಒಳ್ಳೆಯ ಪ್ರಾರಂಭವಾದೀತು. ವಿದ್ವಾಂಸರಾದ ಎಲ್ ಬಸವರಾಜು, ಡಾ. ಎಚ್ ತಿಪ್ಪೇರುದ್ರಸ್ವಾಮಿ ಹೀಗೆ ಹಲವರು ಬಸವಣ್ಣನವರ ವಚನಗಳನ್ನು ಸಂಗ್ರಹಿಸಿ ಪ್ರಸ್ತಾವನೆಗಳನ್ನು ಬರೆದು ಜನಪ್ರಿಯಗೊಳಿಸಿದ್ದಾರೆ. ಯಾವುದಾದರೂ ಆವೃತ್ತಿಯನ್ನು ಉಡುಗೊರೆ ನೀಡಿ!

  1. ವಿಚಾರ ಕ್ರಾಂತಿಗೆ ಆಹ್ವಾನ, ಶೂದ್ರ ತಪಸ್ವಿ ಮತ್ತು ಮಲೆಗಳಲ್ಲಿ ಮದುಮಗಳು

ಇನ್ನು ಕನ್ನಡ ಆಧುನಿಕ ಸಾಹಿತ್ಯದ ಮೇರು ಹೆಸರು ಕುವೆಂಪು. ಕನ್ನಡದ ವಿವೇಕವನ್ನು, ತಿಳಿವನ್ನು ಹೆಚ್ಚಿಸುವುದರಲ್ಲಿ ಕುವೆಂಪು ಅವರ ಕವನ, ಕಥೆ-ಕಾದಂಬರಿಗಳು, ವೈಚಾರಿಕ ಬರಹಗಳು, ನಾಟಕ ಮತ್ತು ಮಹಾಕಾವ್ಯ ಶ್ರೀರಾಮಾಯಣಂ ದರ್ಶನಂ ಕೃತಿಗಳು ಅಪಾರ ಕೊಡುಗೆಯನ್ನು ನೀಡಿವೆ. ಈ ನಿಟ್ಟಿನಲ್ಲಿ 12 ಸಂಪುಟಗಳಲ್ಲಿ ಸಿಗುವ ಅವರ ಸಮಗ್ರ ಬರಹ ಅತ್ಯುತ್ತಮ ಉಡುಗೊರೆಯಾದೀತು. ಬಜೆಟ್‌ನ ಕೊರತೆ ಎಂದಾದರೆ, ಪೌರಾಣಿಕ ಕಾವ್ಯ ರಾಮಾಯಣದಲ್ಲಿರುವ ಶೋಷಣೆಯ ಸಂಗತಿಯೊಂದನ್ನು ತಿದ್ದಿ ಬರೆದ ‘ಶೂದ್ರ ತಪಸ್ವಿ’ ನಾಟಕ, ವೈಚಾರಿಕತೆಯನ್ನು ಉದ್ದೀಪಿಸುವ ‘ವಿಚಾರ ಕ್ರಾಂತಿಗೆ ಆಹ್ವಾನ’ ಮತ್ತು ಭಾರತ ಸಮಾಜಿಕ ವ್ಯವಸ್ಥೆಯನ್ನು ಕಥಾ ನಿರೂಪಣೆಯ ಮೂಲಕ ಶೋಧಿಸುವ, ಅದರಲ್ಲಿರುವ ತಾರತಮ್ಯವನ್ನು ಸರಿಪಡಿಸಿ ಉತ್ತಮ ನಾಗರಿಕರಾಗಬೇಕಿರುವ ಉದಾತ್ತತೆಯನ್ನು ಸಾರುವ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯನ್ನು ಉಡುಗೊರೆಯಲ್ಲಿ ಒಳಗೊಳ್ಳಿ.

ಇದು ಅಂತಿಮವಾದ ಪಟ್ಟಿಯೇನಲ್ಲ. ಪ್ರಾಥಮಿಕ ಮತ್ತು ಪ್ರಾತಿನಿಧಿಕ ಪಟ್ಟಿ ಮಾತ್ರ. ಮುಂದಿನ ಕಂತಿನಲ್ಲಿ ಪ್ರತಿ ಇಲಾಖೆಯ (ಮುಜರಾಯಿ, ಶಿಕ್ಷಣ, ಆರೋಗ್ಯ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಇತ್ಯಾದಿ) ಕಾರ್ಯಕ್ರಮಗಳಿಗೆ ಹೊಂದುವಂತಹ ನಿರ್ದಿಷ್ಟ ಪುಸ್ತಕಗಳನ್ನು ಇಲ್ಲಿ ಪಟ್ಟಿ ಮಾಡಲಾಗುತ್ತದೆ. ಅಲ್ಲಿಯವರೆಗೆ ನೀವು ನಿಮ್ಮ ಸಲಹೆಗಳನ್ನು ಕಮೆಂಟ್ ಮಾಡುವುದನ್ನು ಮರೆಯಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಟರಾಜ್ ಹುಳಿಯಾರ್ ಅವರು ರಚಿಸಿರುವ ಶಾಂತವೇರಿ ಗೋಪಾಲಗೌಡರ ಜೀವನ ಚರಿತ್ರೆ ಮತ್ತು ಬಸವರಾಜು ಮೇಗಲಕೇರಿ ಅವರು ಹೊರತಂದ “ನಮ್ಮ ಅರಸು” ಕೃತಿಗಳು ಉತ್ತಮ ರಾಜಕಾರಣಿಗಳಾಗಲು ಸ್ಪೂರ್ತಿ ನೀಡುತ್ತವೆ. ಹೀಗಾಗಿ ಈ ಕೃತಿಗಳನ್ನೂ ಸಹ ಉಡುಗೊರೆಯಾಗಿ ನೀಡಬಹುದು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...