Homeಕರ್ನಾಟಕಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

- Advertisement -
- Advertisement -

ಕರ್ನಾಟಕ ಸರ್ಕಾರ ಈ ಶ್ರಾವಣದ ಒಂದು ಮಂಗಳವಾರ ಒಂದು ವಿಚಿತ್ರವಾದ ಆದೇಶವನ್ನು ಹೊರಡಿಸಿತು. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಯಾವುದೇ  ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ನೆನಪಿನ ಕಾಣಿಕೆ ನೀಡಬಾರದಾಗಿ, ಅದರ ಬದಲಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದೆಂದು ಮತ್ತು ಇದನ್ನು ಬಹಳ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆ ಆದೇಶ ಆಗ್ರಹಿಸಿದೆ. ಇದರಿಂದ ಹೂ ಮತ್ತು ಹಣ್ಣು ಬೆಳೆಗಾರರು ಹಾಗೂ ಮಾರಾಟಗಾರರಿಗೆ ಸಮಸ್ಯೆ ಆಗುವುದೆಂಬ ಆತಂಕ- ಆಕ್ರೋಶ ಕೂಡ ವ್ಯಕ್ತವಾಗಿದೆ. ಅದರ ಬಗ್ಗೆ ಸರ್ಕಾರ ಗಮನಹರಿಸಿ ಸರಿಪಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂಬು ನಮ್ಮ ಆಶಯವೂ ಕೂಡ.

ಆದರೆ ಈ ಸಮಯದಲ್ಲಿ ಶಾಸಕರಿಗೆ-ಸಚಿವರಿಗೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ನೀಡಲು ಪುಸ್ತಕಗಳನ್ನು ಆಯ್ದು ಕೊಂಡುಕೊಳ್ಳಲು ರಾಜ್ಯಾದ್ಯಂತ ಪುಸ್ತಕದ ಅಂಗಡಿಗಳಿಗೆ ಭಾರಿ ಸಂಖ್ಯೆಯಲ್ಲಿ, ನೂಕುನುಗ್ಗಲಿನಲ್ಲಿ ಜನ ಹೋಗುತ್ತಿದ್ದಾರೆ ಎಂಬ ಅನಧಿಕೃತ ವರದಿಗಳು ಇವೆ. ಅದರ ಸತ್ಯಾಸತ್ಯತೆ ಏನೇ ಇರಲಿ, ಉಡುಗೊರೆ ತರಲು ಪುಸ್ತಕ ಅಂಗಡಿಗೆ ಹೋದವನಿಗೆ ಏನು ಕೊಳ್ಳಬೇಕು ಎಂಬ ಗೊಂದಲ ಮೂಡುವುದು ಸರ್ವೇ ಸಾಮಾನ್ಯ. ಮತ್ತು ಈ ಕಾಲಘಟ್ಟದಲ್ಲಿ ಶಾಸಕರು-ಸಚಿವರು ಆರೋಗ್ಯಕರವಾದದ್ದನ್ನೇ ಓದಬೇಕು ಎಂಬ ಕಾಳಜಿ ಎಲ್ಲರಿಗೂ ಇದ್ದೇ ಇರುತ್ತದಲ್ಲವೇ! ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯದ ಪುಸ್ತಕಗಳ ಬಗ್ಗೆ ಮಾತಾಡ್ತಾ ಇದ್ದೀನಿ ಅಂದುಕೊಳ್ಳಬೇಡಿ. ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವ ಪುಸ್ತಕಗಳನ್ನು ಜನಪ್ರತಿನಿಧಿಗಳು ಓದುವುದು ಅತಿ ಮುಖ್ಯ. ಆ ನಿಟ್ಟಿನಲ್ಲಿ ಉಡುಗೊರೆ ಹುಡುಕಲು ಸಮಸ್ತ ಜನತೆಗೆ ಉಪಯೋಗವಾಗಲಿ ಎಂಬ ದೃಷ್ಟಿಯಿಂದ ಸಲಹೆಗಳನ್ನು ಹಲವು ಕಂತುಗಳಲ್ಲಿ ಇಲ್ಲಿ ನೀಡಲಾಗುವುದು. ಸಾಮಾನ್ಯವಾಗಿ ಯಾರಿಗಾದರೂ ಕೊಡಬಹುದಾದ ಪುಸ್ತಕಗಳ ಸಲಹೆಗಳ ಜೊತೆಗೆ ನಿರ್ದಿಷ್ಟವಾಗಿ ಕೆಲವು ಶಾಸಕರಿಗೆ, ಸಚಿವರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಉಡುಗೊರೆ ನೀಡುವಾಗ ಯಾವ ಪುಸ್ತಕ ನೀಡಿದರೆ ಒಳ್ಳೆಯದು ಎಂಬುದರ ಬಗ್ಗೆಯೂ ಇಲ್ಲಿ ವಿವರಣೆ ಇರಲಿದೆ. ನೀವೂ ಕಮೆಂಟ್ ಬಾಕ್ಸ್ ನಲ್ಲಿ ನಿಮ್ಮ ಸಜೆಶನ್‌ಗಳನ್ನ ಹಾಕುವುದಕ್ಕೆ ಮರೆಯಬೇಡಿ!

ಸಾಮಾನ್ಯವಾಗಿ ಯಾರಿಗೂ ಕೊಡಬಹುದಾದ ಪುಸ್ತಕ ಉಡುಗೊರೆಗಳು!

  1. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು

ಇವತ್ತು ಎಲ್ಲಾ ಜನಪ್ರತಿನಿಧಿಗಳು ಓದಲೇಬೇಕಾದದ್ದು ಎಂದರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಸಮಗ್ರ ಬರಹಗಳನ್ನು. ಭಾರತಕ್ಕೆ ಪ್ರಜಾಪ್ರಭುತ್ವದ ಅಗತ್ಯ ಏಕಿದೆ ಎಂಬುದರಿಂದ ಹಿಡಿದು, ಹಿಂದೂ ಧರ್ಮದಲ್ಲಿ ಅಡಗಿರುವ ಅಪಸವ್ಯಗಳು, ಸಂವಿಧಾನದ ಬಗ್ಗೆ, ಬೌದ್ಧ ಧರ್ಮದ ಬಗ್ಗೆ, ಭಾರತದ ಇತಿಹಾಸದ ಸಂಗತಿಗಳ ಬಗ್ಗೆ – ಒಟ್ಟಿನಲ್ಲಿ ಭಾರತೀಯ ಸಮಾಜ ಆರೋಗ್ಯಪೂರ್ಣವಾಗಿ ಮುನ್ನಡೆಯಲು ಬೇಕಿರುವ ಎಲ್ಲಾ ಸಂಗತಿಗಳು ಇದರಲ್ಲಿ ಅಡಕವಾಗಿವೆ. ಕುವೆಂಪು ಭಾಷಾ ಪ್ರಾಧಿಕಾರ ಇದನ್ನು ಪ್ರಕಟಿಸಿದ್ದು ಈಗ ಪ್ರತಿಗಳ ಲಭ್ಯತೆ ಬಗ್ಗೆ ಗೊಂದಲಗಳಿವೆ. ಶೀಘ್ರದಲ್ಲಿಯೇ ಮರುಮುದ್ರಣ ಮಾಡುವಂತೆ ಒತ್ತಡ ಹಾಕಬೇಕಿದೆ.

  1. ಆತ್ಮಕತೆ ಅಥವಾ ನನ್ನ ಸತ್ಯಾನ್ವೇಷಣೆ

ಸ್ವಾತಂತ್ರ್ಯ ದಿನಾಚರಣೆ ಬೇರೆ ಹತ್ತಿರ ಬರುತ್ತಿದೆ. ರಾಜಕಾರಣಿಗಳು, ಶಾಸಕರು ಸ್ವಾತಂತ್ರ್ಯದ ಬಗ್ಗೆ, ಅದಕ್ಕೆ ಮಹಾತ್ಮ ಗಾಂಧಿಯವರು ನೀಡಿದ ಕೊಡುಗೆ ಬಗ್ಗೆ ಬಹಳಷ್ಟು ಮಾತನಾಡಲಿದ್ದಾರೆ. ಅವರು ಮಹಾತ್ಮ ಗಾಂಧೀಜಿಯ ಬಗ್ಗೆ ಇನ್ನಷ್ಟು ಓದಿಕೊಳ್ಳಲಿ. ಗಾಂಧಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮು ಸೌಹಾರ್ದಕ್ಕೆ ಯಾಕಷ್ಟು ಶ್ರಮಿಸಿದರು ಎಂಬುದನ್ನು ಹೆಚ್ಚು ಅರ್ಥ ಮಾಡಿಕೊಳ್ಳಲಿ. ಈ ದೃಷ್ಟಿಯಿಂದ ಗಾಂಧಿಯವರ ಆತ್ಮಕತೆಯನ್ನು ಅಗತ್ಯವಾಗಿ ಗಿಫ್ಟ್ ಕೊಡಿ. ಕನ್ನಡಕ್ಕೆ ಹಲವು ಬಾರಿ ಗಾಂಧಿ ಆತ್ಮಕತೆ ಅನುವಾದವಾಗಿದ್ದರೂ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಅನುವಾದಿಸಿರುವ ಆವೃತ್ತಿ ಬಹಳ ಜನಪ್ರಿವಾಗಿದ್ದು, ಸುಲಭವಾಗಿ ಪುಸ್ತಕದ ಅಂಗಡಿಗಳಲ್ಲಿ ಲಭ್ಯವಿದೆ.

  1. ಭಾರತ ದರ್ಶನ

ಮೊನ್ನೆ ಮೊನ್ನೆ ಬಿಜೆಪಿ ಶಾಸಕರಾದ ಸಿ ಟಿ ರವಿಯವರು ಭಾರತದ ಪ್ರಥಮ ಮುಖ್ಯಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜವಾಹರ್ ಲಾಲ್ ನೆಹರು ಅವರ ಬಗೆಗಿನ ತಮ್ಮ ಅನುಚಿತ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇನ್ನು ಪೋಸ್ಟ್ ಕಾರ್ಡ್ ನಂತಹ ಸುಳ್ಳುಸುದ್ದಿ ಹರಡುವ ತಾಣಗಳಿಗೆ ನೆಹರೂ ಬಗೆಗೆ ಫೇಕ್ ಸುದ್ದಿಗಳನ್ನು ಸೃಷ್ಟಿ ಮಾಡಿ ಹಂಚುವ ಕೆಲಸ ಅಚ್ಚುಮೆಚ್ಚು. ಜನಪ್ರತಿನಿಧಿಗಳು ಸುಳ್ಳು ಸುದ್ದಿಯಿಂದ ಪ್ರೇರೇಪಿತರಾಗಬಾರದಲ್ಲವೇ? ಅದಕ್ಕೆ ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ದ ಅನುವಾದ ‘ಭಾರತ ದರ್ಶನ’ವನ್ನು ಅಗತ್ಯವಾಗಿ ಉಡುಗೊರೆ ನೀಡಿ. ಮುಂದಿನ ಬಾರಿ ಸಿಕ್ಕಾಗ ‘ಓದಿ ಮುಗಿಸಿದ್ರಾ’ ಅಂತ ಕೇಳುವುದನ್ನು ಮಾತ್ರ ಮರೆಯಬೇಡಿ!

  1. ಬಸವಣ್ಣನವರ ವಚನಗಳು

ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ವೈದಿಕ ಧರ್ಮದ ವಿರುದ್ಧ ಆದ ಶರಣ ಕ್ರಾಂತಿಯನ್ನು ಇಂದಿನ ಜನಪ್ರತಿನಿಧಿಗಳು ತಿಳಿದುಕೊಳ್ಳುವುದು ಅತಿ ಮುಖ್ಯ ಸಂಗತಿ. ಅಂದಿನ ಅನುಭವ ಮಂಟಪ ಜಗತ್ತಿನ ಮೊದಲ ಪ್ರಜಾಸತ್ತೀಯವಾದ ವ್ಯವಸ್ಥೆಯಾಗಿತ್ತು ಅನ್ನುತ್ತಾರೆ. ಈ ನಿಟ್ಟಿನಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವುದಕ್ಕೆ ಪ್ರಾಥಮಿಕವಾಗಿ ಬಸವಣ್ಣನವರ ವಚನಗಳನ್ನು ಓದುವುದು ಒಳ್ಳೆಯ ಪ್ರಾರಂಭವಾದೀತು. ವಿದ್ವಾಂಸರಾದ ಎಲ್ ಬಸವರಾಜು, ಡಾ. ಎಚ್ ತಿಪ್ಪೇರುದ್ರಸ್ವಾಮಿ ಹೀಗೆ ಹಲವರು ಬಸವಣ್ಣನವರ ವಚನಗಳನ್ನು ಸಂಗ್ರಹಿಸಿ ಪ್ರಸ್ತಾವನೆಗಳನ್ನು ಬರೆದು ಜನಪ್ರಿಯಗೊಳಿಸಿದ್ದಾರೆ. ಯಾವುದಾದರೂ ಆವೃತ್ತಿಯನ್ನು ಉಡುಗೊರೆ ನೀಡಿ!

  1. ವಿಚಾರ ಕ್ರಾಂತಿಗೆ ಆಹ್ವಾನ, ಶೂದ್ರ ತಪಸ್ವಿ ಮತ್ತು ಮಲೆಗಳಲ್ಲಿ ಮದುಮಗಳು

ಇನ್ನು ಕನ್ನಡ ಆಧುನಿಕ ಸಾಹಿತ್ಯದ ಮೇರು ಹೆಸರು ಕುವೆಂಪು. ಕನ್ನಡದ ವಿವೇಕವನ್ನು, ತಿಳಿವನ್ನು ಹೆಚ್ಚಿಸುವುದರಲ್ಲಿ ಕುವೆಂಪು ಅವರ ಕವನ, ಕಥೆ-ಕಾದಂಬರಿಗಳು, ವೈಚಾರಿಕ ಬರಹಗಳು, ನಾಟಕ ಮತ್ತು ಮಹಾಕಾವ್ಯ ಶ್ರೀರಾಮಾಯಣಂ ದರ್ಶನಂ ಕೃತಿಗಳು ಅಪಾರ ಕೊಡುಗೆಯನ್ನು ನೀಡಿವೆ. ಈ ನಿಟ್ಟಿನಲ್ಲಿ 12 ಸಂಪುಟಗಳಲ್ಲಿ ಸಿಗುವ ಅವರ ಸಮಗ್ರ ಬರಹ ಅತ್ಯುತ್ತಮ ಉಡುಗೊರೆಯಾದೀತು. ಬಜೆಟ್‌ನ ಕೊರತೆ ಎಂದಾದರೆ, ಪೌರಾಣಿಕ ಕಾವ್ಯ ರಾಮಾಯಣದಲ್ಲಿರುವ ಶೋಷಣೆಯ ಸಂಗತಿಯೊಂದನ್ನು ತಿದ್ದಿ ಬರೆದ ‘ಶೂದ್ರ ತಪಸ್ವಿ’ ನಾಟಕ, ವೈಚಾರಿಕತೆಯನ್ನು ಉದ್ದೀಪಿಸುವ ‘ವಿಚಾರ ಕ್ರಾಂತಿಗೆ ಆಹ್ವಾನ’ ಮತ್ತು ಭಾರತ ಸಮಾಜಿಕ ವ್ಯವಸ್ಥೆಯನ್ನು ಕಥಾ ನಿರೂಪಣೆಯ ಮೂಲಕ ಶೋಧಿಸುವ, ಅದರಲ್ಲಿರುವ ತಾರತಮ್ಯವನ್ನು ಸರಿಪಡಿಸಿ ಉತ್ತಮ ನಾಗರಿಕರಾಗಬೇಕಿರುವ ಉದಾತ್ತತೆಯನ್ನು ಸಾರುವ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯನ್ನು ಉಡುಗೊರೆಯಲ್ಲಿ ಒಳಗೊಳ್ಳಿ.

ಇದು ಅಂತಿಮವಾದ ಪಟ್ಟಿಯೇನಲ್ಲ. ಪ್ರಾಥಮಿಕ ಮತ್ತು ಪ್ರಾತಿನಿಧಿಕ ಪಟ್ಟಿ ಮಾತ್ರ. ಮುಂದಿನ ಕಂತಿನಲ್ಲಿ ಪ್ರತಿ ಇಲಾಖೆಯ (ಮುಜರಾಯಿ, ಶಿಕ್ಷಣ, ಆರೋಗ್ಯ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಇತ್ಯಾದಿ) ಕಾರ್ಯಕ್ರಮಗಳಿಗೆ ಹೊಂದುವಂತಹ ನಿರ್ದಿಷ್ಟ ಪುಸ್ತಕಗಳನ್ನು ಇಲ್ಲಿ ಪಟ್ಟಿ ಮಾಡಲಾಗುತ್ತದೆ. ಅಲ್ಲಿಯವರೆಗೆ ನೀವು ನಿಮ್ಮ ಸಲಹೆಗಳನ್ನು ಕಮೆಂಟ್ ಮಾಡುವುದನ್ನು ಮರೆಯಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಟರಾಜ್ ಹುಳಿಯಾರ್ ಅವರು ರಚಿಸಿರುವ ಶಾಂತವೇರಿ ಗೋಪಾಲಗೌಡರ ಜೀವನ ಚರಿತ್ರೆ ಮತ್ತು ಬಸವರಾಜು ಮೇಗಲಕೇರಿ ಅವರು ಹೊರತಂದ “ನಮ್ಮ ಅರಸು” ಕೃತಿಗಳು ಉತ್ತಮ ರಾಜಕಾರಣಿಗಳಾಗಲು ಸ್ಪೂರ್ತಿ ನೀಡುತ್ತವೆ. ಹೀಗಾಗಿ ಈ ಕೃತಿಗಳನ್ನೂ ಸಹ ಉಡುಗೊರೆಯಾಗಿ ನೀಡಬಹುದು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...