Homeಕರ್ನಾಟಕಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

- Advertisement -
- Advertisement -

ಕರ್ನಾಟಕ ಸರ್ಕಾರ ಈ ಶ್ರಾವಣದ ಒಂದು ಮಂಗಳವಾರ ಒಂದು ವಿಚಿತ್ರವಾದ ಆದೇಶವನ್ನು ಹೊರಡಿಸಿತು. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಯಾವುದೇ  ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ನೆನಪಿನ ಕಾಣಿಕೆ ನೀಡಬಾರದಾಗಿ, ಅದರ ಬದಲಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದೆಂದು ಮತ್ತು ಇದನ್ನು ಬಹಳ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆ ಆದೇಶ ಆಗ್ರಹಿಸಿದೆ. ಇದರಿಂದ ಹೂ ಮತ್ತು ಹಣ್ಣು ಬೆಳೆಗಾರರು ಹಾಗೂ ಮಾರಾಟಗಾರರಿಗೆ ಸಮಸ್ಯೆ ಆಗುವುದೆಂಬ ಆತಂಕ- ಆಕ್ರೋಶ ಕೂಡ ವ್ಯಕ್ತವಾಗಿದೆ. ಅದರ ಬಗ್ಗೆ ಸರ್ಕಾರ ಗಮನಹರಿಸಿ ಸರಿಪಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂಬು ನಮ್ಮ ಆಶಯವೂ ಕೂಡ.

ಆದರೆ ಈ ಸಮಯದಲ್ಲಿ ಶಾಸಕರಿಗೆ-ಸಚಿವರಿಗೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ನೀಡಲು ಪುಸ್ತಕಗಳನ್ನು ಆಯ್ದು ಕೊಂಡುಕೊಳ್ಳಲು ರಾಜ್ಯಾದ್ಯಂತ ಪುಸ್ತಕದ ಅಂಗಡಿಗಳಿಗೆ ಭಾರಿ ಸಂಖ್ಯೆಯಲ್ಲಿ, ನೂಕುನುಗ್ಗಲಿನಲ್ಲಿ ಜನ ಹೋಗುತ್ತಿದ್ದಾರೆ ಎಂಬ ಅನಧಿಕೃತ ವರದಿಗಳು ಇವೆ. ಅದರ ಸತ್ಯಾಸತ್ಯತೆ ಏನೇ ಇರಲಿ, ಉಡುಗೊರೆ ತರಲು ಪುಸ್ತಕ ಅಂಗಡಿಗೆ ಹೋದವನಿಗೆ ಏನು ಕೊಳ್ಳಬೇಕು ಎಂಬ ಗೊಂದಲ ಮೂಡುವುದು ಸರ್ವೇ ಸಾಮಾನ್ಯ. ಮತ್ತು ಈ ಕಾಲಘಟ್ಟದಲ್ಲಿ ಶಾಸಕರು-ಸಚಿವರು ಆರೋಗ್ಯಕರವಾದದ್ದನ್ನೇ ಓದಬೇಕು ಎಂಬ ಕಾಳಜಿ ಎಲ್ಲರಿಗೂ ಇದ್ದೇ ಇರುತ್ತದಲ್ಲವೇ! ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯದ ಪುಸ್ತಕಗಳ ಬಗ್ಗೆ ಮಾತಾಡ್ತಾ ಇದ್ದೀನಿ ಅಂದುಕೊಳ್ಳಬೇಡಿ. ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವ ಪುಸ್ತಕಗಳನ್ನು ಜನಪ್ರತಿನಿಧಿಗಳು ಓದುವುದು ಅತಿ ಮುಖ್ಯ. ಆ ನಿಟ್ಟಿನಲ್ಲಿ ಉಡುಗೊರೆ ಹುಡುಕಲು ಸಮಸ್ತ ಜನತೆಗೆ ಉಪಯೋಗವಾಗಲಿ ಎಂಬ ದೃಷ್ಟಿಯಿಂದ ಸಲಹೆಗಳನ್ನು ಹಲವು ಕಂತುಗಳಲ್ಲಿ ಇಲ್ಲಿ ನೀಡಲಾಗುವುದು. ಸಾಮಾನ್ಯವಾಗಿ ಯಾರಿಗಾದರೂ ಕೊಡಬಹುದಾದ ಪುಸ್ತಕಗಳ ಸಲಹೆಗಳ ಜೊತೆಗೆ ನಿರ್ದಿಷ್ಟವಾಗಿ ಕೆಲವು ಶಾಸಕರಿಗೆ, ಸಚಿವರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಉಡುಗೊರೆ ನೀಡುವಾಗ ಯಾವ ಪುಸ್ತಕ ನೀಡಿದರೆ ಒಳ್ಳೆಯದು ಎಂಬುದರ ಬಗ್ಗೆಯೂ ಇಲ್ಲಿ ವಿವರಣೆ ಇರಲಿದೆ. ನೀವೂ ಕಮೆಂಟ್ ಬಾಕ್ಸ್ ನಲ್ಲಿ ನಿಮ್ಮ ಸಜೆಶನ್‌ಗಳನ್ನ ಹಾಕುವುದಕ್ಕೆ ಮರೆಯಬೇಡಿ!

ಸಾಮಾನ್ಯವಾಗಿ ಯಾರಿಗೂ ಕೊಡಬಹುದಾದ ಪುಸ್ತಕ ಉಡುಗೊರೆಗಳು!

  1. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು

ಇವತ್ತು ಎಲ್ಲಾ ಜನಪ್ರತಿನಿಧಿಗಳು ಓದಲೇಬೇಕಾದದ್ದು ಎಂದರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಸಮಗ್ರ ಬರಹಗಳನ್ನು. ಭಾರತಕ್ಕೆ ಪ್ರಜಾಪ್ರಭುತ್ವದ ಅಗತ್ಯ ಏಕಿದೆ ಎಂಬುದರಿಂದ ಹಿಡಿದು, ಹಿಂದೂ ಧರ್ಮದಲ್ಲಿ ಅಡಗಿರುವ ಅಪಸವ್ಯಗಳು, ಸಂವಿಧಾನದ ಬಗ್ಗೆ, ಬೌದ್ಧ ಧರ್ಮದ ಬಗ್ಗೆ, ಭಾರತದ ಇತಿಹಾಸದ ಸಂಗತಿಗಳ ಬಗ್ಗೆ – ಒಟ್ಟಿನಲ್ಲಿ ಭಾರತೀಯ ಸಮಾಜ ಆರೋಗ್ಯಪೂರ್ಣವಾಗಿ ಮುನ್ನಡೆಯಲು ಬೇಕಿರುವ ಎಲ್ಲಾ ಸಂಗತಿಗಳು ಇದರಲ್ಲಿ ಅಡಕವಾಗಿವೆ. ಕುವೆಂಪು ಭಾಷಾ ಪ್ರಾಧಿಕಾರ ಇದನ್ನು ಪ್ರಕಟಿಸಿದ್ದು ಈಗ ಪ್ರತಿಗಳ ಲಭ್ಯತೆ ಬಗ್ಗೆ ಗೊಂದಲಗಳಿವೆ. ಶೀಘ್ರದಲ್ಲಿಯೇ ಮರುಮುದ್ರಣ ಮಾಡುವಂತೆ ಒತ್ತಡ ಹಾಕಬೇಕಿದೆ.

  1. ಆತ್ಮಕತೆ ಅಥವಾ ನನ್ನ ಸತ್ಯಾನ್ವೇಷಣೆ

ಸ್ವಾತಂತ್ರ್ಯ ದಿನಾಚರಣೆ ಬೇರೆ ಹತ್ತಿರ ಬರುತ್ತಿದೆ. ರಾಜಕಾರಣಿಗಳು, ಶಾಸಕರು ಸ್ವಾತಂತ್ರ್ಯದ ಬಗ್ಗೆ, ಅದಕ್ಕೆ ಮಹಾತ್ಮ ಗಾಂಧಿಯವರು ನೀಡಿದ ಕೊಡುಗೆ ಬಗ್ಗೆ ಬಹಳಷ್ಟು ಮಾತನಾಡಲಿದ್ದಾರೆ. ಅವರು ಮಹಾತ್ಮ ಗಾಂಧೀಜಿಯ ಬಗ್ಗೆ ಇನ್ನಷ್ಟು ಓದಿಕೊಳ್ಳಲಿ. ಗಾಂಧಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮು ಸೌಹಾರ್ದಕ್ಕೆ ಯಾಕಷ್ಟು ಶ್ರಮಿಸಿದರು ಎಂಬುದನ್ನು ಹೆಚ್ಚು ಅರ್ಥ ಮಾಡಿಕೊಳ್ಳಲಿ. ಈ ದೃಷ್ಟಿಯಿಂದ ಗಾಂಧಿಯವರ ಆತ್ಮಕತೆಯನ್ನು ಅಗತ್ಯವಾಗಿ ಗಿಫ್ಟ್ ಕೊಡಿ. ಕನ್ನಡಕ್ಕೆ ಹಲವು ಬಾರಿ ಗಾಂಧಿ ಆತ್ಮಕತೆ ಅನುವಾದವಾಗಿದ್ದರೂ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಅನುವಾದಿಸಿರುವ ಆವೃತ್ತಿ ಬಹಳ ಜನಪ್ರಿವಾಗಿದ್ದು, ಸುಲಭವಾಗಿ ಪುಸ್ತಕದ ಅಂಗಡಿಗಳಲ್ಲಿ ಲಭ್ಯವಿದೆ.

  1. ಭಾರತ ದರ್ಶನ

ಮೊನ್ನೆ ಮೊನ್ನೆ ಬಿಜೆಪಿ ಶಾಸಕರಾದ ಸಿ ಟಿ ರವಿಯವರು ಭಾರತದ ಪ್ರಥಮ ಮುಖ್ಯಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜವಾಹರ್ ಲಾಲ್ ನೆಹರು ಅವರ ಬಗೆಗಿನ ತಮ್ಮ ಅನುಚಿತ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇನ್ನು ಪೋಸ್ಟ್ ಕಾರ್ಡ್ ನಂತಹ ಸುಳ್ಳುಸುದ್ದಿ ಹರಡುವ ತಾಣಗಳಿಗೆ ನೆಹರೂ ಬಗೆಗೆ ಫೇಕ್ ಸುದ್ದಿಗಳನ್ನು ಸೃಷ್ಟಿ ಮಾಡಿ ಹಂಚುವ ಕೆಲಸ ಅಚ್ಚುಮೆಚ್ಚು. ಜನಪ್ರತಿನಿಧಿಗಳು ಸುಳ್ಳು ಸುದ್ದಿಯಿಂದ ಪ್ರೇರೇಪಿತರಾಗಬಾರದಲ್ಲವೇ? ಅದಕ್ಕೆ ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ದ ಅನುವಾದ ‘ಭಾರತ ದರ್ಶನ’ವನ್ನು ಅಗತ್ಯವಾಗಿ ಉಡುಗೊರೆ ನೀಡಿ. ಮುಂದಿನ ಬಾರಿ ಸಿಕ್ಕಾಗ ‘ಓದಿ ಮುಗಿಸಿದ್ರಾ’ ಅಂತ ಕೇಳುವುದನ್ನು ಮಾತ್ರ ಮರೆಯಬೇಡಿ!

  1. ಬಸವಣ್ಣನವರ ವಚನಗಳು

ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ವೈದಿಕ ಧರ್ಮದ ವಿರುದ್ಧ ಆದ ಶರಣ ಕ್ರಾಂತಿಯನ್ನು ಇಂದಿನ ಜನಪ್ರತಿನಿಧಿಗಳು ತಿಳಿದುಕೊಳ್ಳುವುದು ಅತಿ ಮುಖ್ಯ ಸಂಗತಿ. ಅಂದಿನ ಅನುಭವ ಮಂಟಪ ಜಗತ್ತಿನ ಮೊದಲ ಪ್ರಜಾಸತ್ತೀಯವಾದ ವ್ಯವಸ್ಥೆಯಾಗಿತ್ತು ಅನ್ನುತ್ತಾರೆ. ಈ ನಿಟ್ಟಿನಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವುದಕ್ಕೆ ಪ್ರಾಥಮಿಕವಾಗಿ ಬಸವಣ್ಣನವರ ವಚನಗಳನ್ನು ಓದುವುದು ಒಳ್ಳೆಯ ಪ್ರಾರಂಭವಾದೀತು. ವಿದ್ವಾಂಸರಾದ ಎಲ್ ಬಸವರಾಜು, ಡಾ. ಎಚ್ ತಿಪ್ಪೇರುದ್ರಸ್ವಾಮಿ ಹೀಗೆ ಹಲವರು ಬಸವಣ್ಣನವರ ವಚನಗಳನ್ನು ಸಂಗ್ರಹಿಸಿ ಪ್ರಸ್ತಾವನೆಗಳನ್ನು ಬರೆದು ಜನಪ್ರಿಯಗೊಳಿಸಿದ್ದಾರೆ. ಯಾವುದಾದರೂ ಆವೃತ್ತಿಯನ್ನು ಉಡುಗೊರೆ ನೀಡಿ!

  1. ವಿಚಾರ ಕ್ರಾಂತಿಗೆ ಆಹ್ವಾನ, ಶೂದ್ರ ತಪಸ್ವಿ ಮತ್ತು ಮಲೆಗಳಲ್ಲಿ ಮದುಮಗಳು

ಇನ್ನು ಕನ್ನಡ ಆಧುನಿಕ ಸಾಹಿತ್ಯದ ಮೇರು ಹೆಸರು ಕುವೆಂಪು. ಕನ್ನಡದ ವಿವೇಕವನ್ನು, ತಿಳಿವನ್ನು ಹೆಚ್ಚಿಸುವುದರಲ್ಲಿ ಕುವೆಂಪು ಅವರ ಕವನ, ಕಥೆ-ಕಾದಂಬರಿಗಳು, ವೈಚಾರಿಕ ಬರಹಗಳು, ನಾಟಕ ಮತ್ತು ಮಹಾಕಾವ್ಯ ಶ್ರೀರಾಮಾಯಣಂ ದರ್ಶನಂ ಕೃತಿಗಳು ಅಪಾರ ಕೊಡುಗೆಯನ್ನು ನೀಡಿವೆ. ಈ ನಿಟ್ಟಿನಲ್ಲಿ 12 ಸಂಪುಟಗಳಲ್ಲಿ ಸಿಗುವ ಅವರ ಸಮಗ್ರ ಬರಹ ಅತ್ಯುತ್ತಮ ಉಡುಗೊರೆಯಾದೀತು. ಬಜೆಟ್‌ನ ಕೊರತೆ ಎಂದಾದರೆ, ಪೌರಾಣಿಕ ಕಾವ್ಯ ರಾಮಾಯಣದಲ್ಲಿರುವ ಶೋಷಣೆಯ ಸಂಗತಿಯೊಂದನ್ನು ತಿದ್ದಿ ಬರೆದ ‘ಶೂದ್ರ ತಪಸ್ವಿ’ ನಾಟಕ, ವೈಚಾರಿಕತೆಯನ್ನು ಉದ್ದೀಪಿಸುವ ‘ವಿಚಾರ ಕ್ರಾಂತಿಗೆ ಆಹ್ವಾನ’ ಮತ್ತು ಭಾರತ ಸಮಾಜಿಕ ವ್ಯವಸ್ಥೆಯನ್ನು ಕಥಾ ನಿರೂಪಣೆಯ ಮೂಲಕ ಶೋಧಿಸುವ, ಅದರಲ್ಲಿರುವ ತಾರತಮ್ಯವನ್ನು ಸರಿಪಡಿಸಿ ಉತ್ತಮ ನಾಗರಿಕರಾಗಬೇಕಿರುವ ಉದಾತ್ತತೆಯನ್ನು ಸಾರುವ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯನ್ನು ಉಡುಗೊರೆಯಲ್ಲಿ ಒಳಗೊಳ್ಳಿ.

ಇದು ಅಂತಿಮವಾದ ಪಟ್ಟಿಯೇನಲ್ಲ. ಪ್ರಾಥಮಿಕ ಮತ್ತು ಪ್ರಾತಿನಿಧಿಕ ಪಟ್ಟಿ ಮಾತ್ರ. ಮುಂದಿನ ಕಂತಿನಲ್ಲಿ ಪ್ರತಿ ಇಲಾಖೆಯ (ಮುಜರಾಯಿ, ಶಿಕ್ಷಣ, ಆರೋಗ್ಯ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಇತ್ಯಾದಿ) ಕಾರ್ಯಕ್ರಮಗಳಿಗೆ ಹೊಂದುವಂತಹ ನಿರ್ದಿಷ್ಟ ಪುಸ್ತಕಗಳನ್ನು ಇಲ್ಲಿ ಪಟ್ಟಿ ಮಾಡಲಾಗುತ್ತದೆ. ಅಲ್ಲಿಯವರೆಗೆ ನೀವು ನಿಮ್ಮ ಸಲಹೆಗಳನ್ನು ಕಮೆಂಟ್ ಮಾಡುವುದನ್ನು ಮರೆಯಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಟರಾಜ್ ಹುಳಿಯಾರ್ ಅವರು ರಚಿಸಿರುವ ಶಾಂತವೇರಿ ಗೋಪಾಲಗೌಡರ ಜೀವನ ಚರಿತ್ರೆ ಮತ್ತು ಬಸವರಾಜು ಮೇಗಲಕೇರಿ ಅವರು ಹೊರತಂದ “ನಮ್ಮ ಅರಸು” ಕೃತಿಗಳು ಉತ್ತಮ ರಾಜಕಾರಣಿಗಳಾಗಲು ಸ್ಪೂರ್ತಿ ನೀಡುತ್ತವೆ. ಹೀಗಾಗಿ ಈ ಕೃತಿಗಳನ್ನೂ ಸಹ ಉಡುಗೊರೆಯಾಗಿ ನೀಡಬಹುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...