Homeಕರ್ನಾಟಕಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

- Advertisement -
- Advertisement -

ಕರ್ನಾಟಕ ಸರ್ಕಾರ ಈ ಶ್ರಾವಣದ ಒಂದು ಮಂಗಳವಾರ ಒಂದು ವಿಚಿತ್ರವಾದ ಆದೇಶವನ್ನು ಹೊರಡಿಸಿತು. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಯಾವುದೇ  ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ನೆನಪಿನ ಕಾಣಿಕೆ ನೀಡಬಾರದಾಗಿ, ಅದರ ಬದಲಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದೆಂದು ಮತ್ತು ಇದನ್ನು ಬಹಳ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆ ಆದೇಶ ಆಗ್ರಹಿಸಿದೆ. ಇದರಿಂದ ಹೂ ಮತ್ತು ಹಣ್ಣು ಬೆಳೆಗಾರರು ಹಾಗೂ ಮಾರಾಟಗಾರರಿಗೆ ಸಮಸ್ಯೆ ಆಗುವುದೆಂಬ ಆತಂಕ- ಆಕ್ರೋಶ ಕೂಡ ವ್ಯಕ್ತವಾಗಿದೆ. ಅದರ ಬಗ್ಗೆ ಸರ್ಕಾರ ಗಮನಹರಿಸಿ ಸರಿಪಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂಬು ನಮ್ಮ ಆಶಯವೂ ಕೂಡ.

ಆದರೆ ಈ ಸಮಯದಲ್ಲಿ ಶಾಸಕರಿಗೆ-ಸಚಿವರಿಗೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ನೀಡಲು ಪುಸ್ತಕಗಳನ್ನು ಆಯ್ದು ಕೊಂಡುಕೊಳ್ಳಲು ರಾಜ್ಯಾದ್ಯಂತ ಪುಸ್ತಕದ ಅಂಗಡಿಗಳಿಗೆ ಭಾರಿ ಸಂಖ್ಯೆಯಲ್ಲಿ, ನೂಕುನುಗ್ಗಲಿನಲ್ಲಿ ಜನ ಹೋಗುತ್ತಿದ್ದಾರೆ ಎಂಬ ಅನಧಿಕೃತ ವರದಿಗಳು ಇವೆ. ಅದರ ಸತ್ಯಾಸತ್ಯತೆ ಏನೇ ಇರಲಿ, ಉಡುಗೊರೆ ತರಲು ಪುಸ್ತಕ ಅಂಗಡಿಗೆ ಹೋದವನಿಗೆ ಏನು ಕೊಳ್ಳಬೇಕು ಎಂಬ ಗೊಂದಲ ಮೂಡುವುದು ಸರ್ವೇ ಸಾಮಾನ್ಯ. ಮತ್ತು ಈ ಕಾಲಘಟ್ಟದಲ್ಲಿ ಶಾಸಕರು-ಸಚಿವರು ಆರೋಗ್ಯಕರವಾದದ್ದನ್ನೇ ಓದಬೇಕು ಎಂಬ ಕಾಳಜಿ ಎಲ್ಲರಿಗೂ ಇದ್ದೇ ಇರುತ್ತದಲ್ಲವೇ! ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯದ ಪುಸ್ತಕಗಳ ಬಗ್ಗೆ ಮಾತಾಡ್ತಾ ಇದ್ದೀನಿ ಅಂದುಕೊಳ್ಳಬೇಡಿ. ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವ ಪುಸ್ತಕಗಳನ್ನು ಜನಪ್ರತಿನಿಧಿಗಳು ಓದುವುದು ಅತಿ ಮುಖ್ಯ. ಆ ನಿಟ್ಟಿನಲ್ಲಿ ಉಡುಗೊರೆ ಹುಡುಕಲು ಸಮಸ್ತ ಜನತೆಗೆ ಉಪಯೋಗವಾಗಲಿ ಎಂಬ ದೃಷ್ಟಿಯಿಂದ ಸಲಹೆಗಳನ್ನು ಹಲವು ಕಂತುಗಳಲ್ಲಿ ಇಲ್ಲಿ ನೀಡಲಾಗುವುದು. ಸಾಮಾನ್ಯವಾಗಿ ಯಾರಿಗಾದರೂ ಕೊಡಬಹುದಾದ ಪುಸ್ತಕಗಳ ಸಲಹೆಗಳ ಜೊತೆಗೆ ನಿರ್ದಿಷ್ಟವಾಗಿ ಕೆಲವು ಶಾಸಕರಿಗೆ, ಸಚಿವರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಉಡುಗೊರೆ ನೀಡುವಾಗ ಯಾವ ಪುಸ್ತಕ ನೀಡಿದರೆ ಒಳ್ಳೆಯದು ಎಂಬುದರ ಬಗ್ಗೆಯೂ ಇಲ್ಲಿ ವಿವರಣೆ ಇರಲಿದೆ. ನೀವೂ ಕಮೆಂಟ್ ಬಾಕ್ಸ್ ನಲ್ಲಿ ನಿಮ್ಮ ಸಜೆಶನ್‌ಗಳನ್ನ ಹಾಕುವುದಕ್ಕೆ ಮರೆಯಬೇಡಿ!

ಸಾಮಾನ್ಯವಾಗಿ ಯಾರಿಗೂ ಕೊಡಬಹುದಾದ ಪುಸ್ತಕ ಉಡುಗೊರೆಗಳು!

  1. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು

ಇವತ್ತು ಎಲ್ಲಾ ಜನಪ್ರತಿನಿಧಿಗಳು ಓದಲೇಬೇಕಾದದ್ದು ಎಂದರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಸಮಗ್ರ ಬರಹಗಳನ್ನು. ಭಾರತಕ್ಕೆ ಪ್ರಜಾಪ್ರಭುತ್ವದ ಅಗತ್ಯ ಏಕಿದೆ ಎಂಬುದರಿಂದ ಹಿಡಿದು, ಹಿಂದೂ ಧರ್ಮದಲ್ಲಿ ಅಡಗಿರುವ ಅಪಸವ್ಯಗಳು, ಸಂವಿಧಾನದ ಬಗ್ಗೆ, ಬೌದ್ಧ ಧರ್ಮದ ಬಗ್ಗೆ, ಭಾರತದ ಇತಿಹಾಸದ ಸಂಗತಿಗಳ ಬಗ್ಗೆ – ಒಟ್ಟಿನಲ್ಲಿ ಭಾರತೀಯ ಸಮಾಜ ಆರೋಗ್ಯಪೂರ್ಣವಾಗಿ ಮುನ್ನಡೆಯಲು ಬೇಕಿರುವ ಎಲ್ಲಾ ಸಂಗತಿಗಳು ಇದರಲ್ಲಿ ಅಡಕವಾಗಿವೆ. ಕುವೆಂಪು ಭಾಷಾ ಪ್ರಾಧಿಕಾರ ಇದನ್ನು ಪ್ರಕಟಿಸಿದ್ದು ಈಗ ಪ್ರತಿಗಳ ಲಭ್ಯತೆ ಬಗ್ಗೆ ಗೊಂದಲಗಳಿವೆ. ಶೀಘ್ರದಲ್ಲಿಯೇ ಮರುಮುದ್ರಣ ಮಾಡುವಂತೆ ಒತ್ತಡ ಹಾಕಬೇಕಿದೆ.

  1. ಆತ್ಮಕತೆ ಅಥವಾ ನನ್ನ ಸತ್ಯಾನ್ವೇಷಣೆ

ಸ್ವಾತಂತ್ರ್ಯ ದಿನಾಚರಣೆ ಬೇರೆ ಹತ್ತಿರ ಬರುತ್ತಿದೆ. ರಾಜಕಾರಣಿಗಳು, ಶಾಸಕರು ಸ್ವಾತಂತ್ರ್ಯದ ಬಗ್ಗೆ, ಅದಕ್ಕೆ ಮಹಾತ್ಮ ಗಾಂಧಿಯವರು ನೀಡಿದ ಕೊಡುಗೆ ಬಗ್ಗೆ ಬಹಳಷ್ಟು ಮಾತನಾಡಲಿದ್ದಾರೆ. ಅವರು ಮಹಾತ್ಮ ಗಾಂಧೀಜಿಯ ಬಗ್ಗೆ ಇನ್ನಷ್ಟು ಓದಿಕೊಳ್ಳಲಿ. ಗಾಂಧಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮು ಸೌಹಾರ್ದಕ್ಕೆ ಯಾಕಷ್ಟು ಶ್ರಮಿಸಿದರು ಎಂಬುದನ್ನು ಹೆಚ್ಚು ಅರ್ಥ ಮಾಡಿಕೊಳ್ಳಲಿ. ಈ ದೃಷ್ಟಿಯಿಂದ ಗಾಂಧಿಯವರ ಆತ್ಮಕತೆಯನ್ನು ಅಗತ್ಯವಾಗಿ ಗಿಫ್ಟ್ ಕೊಡಿ. ಕನ್ನಡಕ್ಕೆ ಹಲವು ಬಾರಿ ಗಾಂಧಿ ಆತ್ಮಕತೆ ಅನುವಾದವಾಗಿದ್ದರೂ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಅನುವಾದಿಸಿರುವ ಆವೃತ್ತಿ ಬಹಳ ಜನಪ್ರಿವಾಗಿದ್ದು, ಸುಲಭವಾಗಿ ಪುಸ್ತಕದ ಅಂಗಡಿಗಳಲ್ಲಿ ಲಭ್ಯವಿದೆ.

  1. ಭಾರತ ದರ್ಶನ

ಮೊನ್ನೆ ಮೊನ್ನೆ ಬಿಜೆಪಿ ಶಾಸಕರಾದ ಸಿ ಟಿ ರವಿಯವರು ಭಾರತದ ಪ್ರಥಮ ಮುಖ್ಯಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜವಾಹರ್ ಲಾಲ್ ನೆಹರು ಅವರ ಬಗೆಗಿನ ತಮ್ಮ ಅನುಚಿತ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇನ್ನು ಪೋಸ್ಟ್ ಕಾರ್ಡ್ ನಂತಹ ಸುಳ್ಳುಸುದ್ದಿ ಹರಡುವ ತಾಣಗಳಿಗೆ ನೆಹರೂ ಬಗೆಗೆ ಫೇಕ್ ಸುದ್ದಿಗಳನ್ನು ಸೃಷ್ಟಿ ಮಾಡಿ ಹಂಚುವ ಕೆಲಸ ಅಚ್ಚುಮೆಚ್ಚು. ಜನಪ್ರತಿನಿಧಿಗಳು ಸುಳ್ಳು ಸುದ್ದಿಯಿಂದ ಪ್ರೇರೇಪಿತರಾಗಬಾರದಲ್ಲವೇ? ಅದಕ್ಕೆ ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ದ ಅನುವಾದ ‘ಭಾರತ ದರ್ಶನ’ವನ್ನು ಅಗತ್ಯವಾಗಿ ಉಡುಗೊರೆ ನೀಡಿ. ಮುಂದಿನ ಬಾರಿ ಸಿಕ್ಕಾಗ ‘ಓದಿ ಮುಗಿಸಿದ್ರಾ’ ಅಂತ ಕೇಳುವುದನ್ನು ಮಾತ್ರ ಮರೆಯಬೇಡಿ!

  1. ಬಸವಣ್ಣನವರ ವಚನಗಳು

ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ವೈದಿಕ ಧರ್ಮದ ವಿರುದ್ಧ ಆದ ಶರಣ ಕ್ರಾಂತಿಯನ್ನು ಇಂದಿನ ಜನಪ್ರತಿನಿಧಿಗಳು ತಿಳಿದುಕೊಳ್ಳುವುದು ಅತಿ ಮುಖ್ಯ ಸಂಗತಿ. ಅಂದಿನ ಅನುಭವ ಮಂಟಪ ಜಗತ್ತಿನ ಮೊದಲ ಪ್ರಜಾಸತ್ತೀಯವಾದ ವ್ಯವಸ್ಥೆಯಾಗಿತ್ತು ಅನ್ನುತ್ತಾರೆ. ಈ ನಿಟ್ಟಿನಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವುದಕ್ಕೆ ಪ್ರಾಥಮಿಕವಾಗಿ ಬಸವಣ್ಣನವರ ವಚನಗಳನ್ನು ಓದುವುದು ಒಳ್ಳೆಯ ಪ್ರಾರಂಭವಾದೀತು. ವಿದ್ವಾಂಸರಾದ ಎಲ್ ಬಸವರಾಜು, ಡಾ. ಎಚ್ ತಿಪ್ಪೇರುದ್ರಸ್ವಾಮಿ ಹೀಗೆ ಹಲವರು ಬಸವಣ್ಣನವರ ವಚನಗಳನ್ನು ಸಂಗ್ರಹಿಸಿ ಪ್ರಸ್ತಾವನೆಗಳನ್ನು ಬರೆದು ಜನಪ್ರಿಯಗೊಳಿಸಿದ್ದಾರೆ. ಯಾವುದಾದರೂ ಆವೃತ್ತಿಯನ್ನು ಉಡುಗೊರೆ ನೀಡಿ!

  1. ವಿಚಾರ ಕ್ರಾಂತಿಗೆ ಆಹ್ವಾನ, ಶೂದ್ರ ತಪಸ್ವಿ ಮತ್ತು ಮಲೆಗಳಲ್ಲಿ ಮದುಮಗಳು

ಇನ್ನು ಕನ್ನಡ ಆಧುನಿಕ ಸಾಹಿತ್ಯದ ಮೇರು ಹೆಸರು ಕುವೆಂಪು. ಕನ್ನಡದ ವಿವೇಕವನ್ನು, ತಿಳಿವನ್ನು ಹೆಚ್ಚಿಸುವುದರಲ್ಲಿ ಕುವೆಂಪು ಅವರ ಕವನ, ಕಥೆ-ಕಾದಂಬರಿಗಳು, ವೈಚಾರಿಕ ಬರಹಗಳು, ನಾಟಕ ಮತ್ತು ಮಹಾಕಾವ್ಯ ಶ್ರೀರಾಮಾಯಣಂ ದರ್ಶನಂ ಕೃತಿಗಳು ಅಪಾರ ಕೊಡುಗೆಯನ್ನು ನೀಡಿವೆ. ಈ ನಿಟ್ಟಿನಲ್ಲಿ 12 ಸಂಪುಟಗಳಲ್ಲಿ ಸಿಗುವ ಅವರ ಸಮಗ್ರ ಬರಹ ಅತ್ಯುತ್ತಮ ಉಡುಗೊರೆಯಾದೀತು. ಬಜೆಟ್‌ನ ಕೊರತೆ ಎಂದಾದರೆ, ಪೌರಾಣಿಕ ಕಾವ್ಯ ರಾಮಾಯಣದಲ್ಲಿರುವ ಶೋಷಣೆಯ ಸಂಗತಿಯೊಂದನ್ನು ತಿದ್ದಿ ಬರೆದ ‘ಶೂದ್ರ ತಪಸ್ವಿ’ ನಾಟಕ, ವೈಚಾರಿಕತೆಯನ್ನು ಉದ್ದೀಪಿಸುವ ‘ವಿಚಾರ ಕ್ರಾಂತಿಗೆ ಆಹ್ವಾನ’ ಮತ್ತು ಭಾರತ ಸಮಾಜಿಕ ವ್ಯವಸ್ಥೆಯನ್ನು ಕಥಾ ನಿರೂಪಣೆಯ ಮೂಲಕ ಶೋಧಿಸುವ, ಅದರಲ್ಲಿರುವ ತಾರತಮ್ಯವನ್ನು ಸರಿಪಡಿಸಿ ಉತ್ತಮ ನಾಗರಿಕರಾಗಬೇಕಿರುವ ಉದಾತ್ತತೆಯನ್ನು ಸಾರುವ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯನ್ನು ಉಡುಗೊರೆಯಲ್ಲಿ ಒಳಗೊಳ್ಳಿ.

ಇದು ಅಂತಿಮವಾದ ಪಟ್ಟಿಯೇನಲ್ಲ. ಪ್ರಾಥಮಿಕ ಮತ್ತು ಪ್ರಾತಿನಿಧಿಕ ಪಟ್ಟಿ ಮಾತ್ರ. ಮುಂದಿನ ಕಂತಿನಲ್ಲಿ ಪ್ರತಿ ಇಲಾಖೆಯ (ಮುಜರಾಯಿ, ಶಿಕ್ಷಣ, ಆರೋಗ್ಯ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಇತ್ಯಾದಿ) ಕಾರ್ಯಕ್ರಮಗಳಿಗೆ ಹೊಂದುವಂತಹ ನಿರ್ದಿಷ್ಟ ಪುಸ್ತಕಗಳನ್ನು ಇಲ್ಲಿ ಪಟ್ಟಿ ಮಾಡಲಾಗುತ್ತದೆ. ಅಲ್ಲಿಯವರೆಗೆ ನೀವು ನಿಮ್ಮ ಸಲಹೆಗಳನ್ನು ಕಮೆಂಟ್ ಮಾಡುವುದನ್ನು ಮರೆಯಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಟರಾಜ್ ಹುಳಿಯಾರ್ ಅವರು ರಚಿಸಿರುವ ಶಾಂತವೇರಿ ಗೋಪಾಲಗೌಡರ ಜೀವನ ಚರಿತ್ರೆ ಮತ್ತು ಬಸವರಾಜು ಮೇಗಲಕೇರಿ ಅವರು ಹೊರತಂದ “ನಮ್ಮ ಅರಸು” ಕೃತಿಗಳು ಉತ್ತಮ ರಾಜಕಾರಣಿಗಳಾಗಲು ಸ್ಪೂರ್ತಿ ನೀಡುತ್ತವೆ. ಹೀಗಾಗಿ ಈ ಕೃತಿಗಳನ್ನೂ ಸಹ ಉಡುಗೊರೆಯಾಗಿ ನೀಡಬಹುದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....