Homeಮುಖಪುಟಕೇಂದ್ರದ ವಿರುದ್ದ 'ದೆಹಲಿ ಚಲೋ' : ರಾಜ್ಯ ಸರ್ಕಾರದಿಂದ 'ನನ್ನ ತೆರಿಗೆ ನನ್ನ ಹಕ್ಕು' ಹೋರಾಟ

ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

- Advertisement -
- Advertisement -

ಇದು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ. ಬಿಜೆಪಿ ವಿರುದ್ದ ಪ್ರತಿಭಟನೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ‘ನನ್ನ ತೆರಿಗೆ, ನನ್ನ ಹಕ್ಕು’ ಎಂಬ ಘೋಷ ವಾಕ್ಯದಡಿ ನಡೆದ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಸಿಎಂ ಮಾತನಾಡಿದರು.

ಇದೊಂದು ಐತಿಹಾಸಿಕ ಪ್ರತಿಭಟನೆ. ಕೇಂದ್ರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹೋರಾಡುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯ ವಿರುದ್ದ ಇಲ್ಲ ಎಂದು ಸಿಎಂ ತಿಳಿಸಿದರು.

ಕಾನೂನಾತ್ಮಕವಾಗಿ ಅನುದಾನ ಹಂಚಿಕೆಯಾಗಬೇಕು. ನಮಗೆ ಕೊಡಬೇಕಿದ್ದ ತೆರಿಗೆ ಪಾಲು ಇಳಿಕೆ ಮಾಡಿದ್ದಾರೆ. ಮಾನದಂಡಗಳ ಪ್ರಕಾರ ಅನುದಾನ ನೀಡಿಲ್ಲ. ಬಡ ರಾಜ್ಯಗಳಿಗೆ ಕೊಡುವುದಕ್ಕೆ ತಕರಾರಿಲ್ಲ. ಆದರೆ, ಉತ್ತರದ ರಾಜ್ಯಗಳಿಗೆ, ವಿಶೇಷವಾಗಿ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುವ ನಮಗೆ ಅನ್ಯಾಯ ಮಾಡಲಾಗಿದೆ. ‘ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ಯಬಾರದು. ಚಿನ್ನದ ಮೊಟ್ಟೆ ಇಡುವ ಕೋಳಿ ಕೊಯ್ಯಬಾರದು’ ಎಂದರು.

ತೆರಿಗೆ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಎನ್‌ಡಿಆರ್‌ಎಫ್‌ ಅನುದಾನ ಕೇಳಿದ್ದಕ್ಕೆ ಕೊಟ್ಟಿಲ್ಲ, ಕಾಯುತ್ತಿದ್ದೇವೆ. ಮಹದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಲ್ಲ. ದಕ್ಷಿಣದವರು ಜನಸಂಖ್ಯೆ ನಿಯಂತ್ರಣ ಮಾಡಿದ್ದೇ ಶಾಪವಾಯ್ತಾ? ಎಂದು ಸಿಎಂ ಪ್ರಶ್ನಿಸಿದರು.

ಕರ್ನಾಟಕದಿಂದಲೇ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್ ವಿರುದ್ದ ಹರಿಹಾಯ್ದ ಸಿಎಂ, “ಅಮ್ಮ ನಮ್ಮ ದುಡ್ಡು ಕೊಡಮ್ಮ, ಯಾಕೆ ಸುಳ್ಳು ಹೇಳ್ತೀಯ ತಾಯಿ?” ಎಂದು ಕಾಳೆಲೆದರು.

ನಮ್ಮ ಪಾಲು ಕೇಳಲು ಇಲ್ಲಿಗೆ ಬಂದಿದ್ದೇವೆ : ಡಿಕೆಶಿ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ದೊಡ್ಡ ರಾಜ್ಯ ಕರ್ನಾಟಕ. ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ನಮ್ಮ ಪಾಲು ಕೇಳುತ್ತಿದ್ದೇವೆ. ನಾವೆಲ್ಲರೂ ಇಲ್ಲಿ ಕರ್ನಾಟಕದ ಜನರಿಗಾಗಿ ಹೋರಾಡುತ್ತಿದ್ದೇವೆ ಎಂದು ತೋರಿಸಲು ಬಂದಿದ್ದೇವೆ ಎಂದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’: ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...