Homeಮುಖಪುಟಕೇಂದ್ರದ ವಿರುದ್ದ 'ದೆಹಲಿ ಚಲೋ' : ರಾಜ್ಯ ಸರ್ಕಾರದಿಂದ 'ನನ್ನ ತೆರಿಗೆ ನನ್ನ ಹಕ್ಕು' ಹೋರಾಟ

ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

- Advertisement -
- Advertisement -

ಇದು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ. ಬಿಜೆಪಿ ವಿರುದ್ದ ಪ್ರತಿಭಟನೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ‘ನನ್ನ ತೆರಿಗೆ, ನನ್ನ ಹಕ್ಕು’ ಎಂಬ ಘೋಷ ವಾಕ್ಯದಡಿ ನಡೆದ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಸಿಎಂ ಮಾತನಾಡಿದರು.

ಇದೊಂದು ಐತಿಹಾಸಿಕ ಪ್ರತಿಭಟನೆ. ಕೇಂದ್ರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹೋರಾಡುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯ ವಿರುದ್ದ ಇಲ್ಲ ಎಂದು ಸಿಎಂ ತಿಳಿಸಿದರು.

ಕಾನೂನಾತ್ಮಕವಾಗಿ ಅನುದಾನ ಹಂಚಿಕೆಯಾಗಬೇಕು. ನಮಗೆ ಕೊಡಬೇಕಿದ್ದ ತೆರಿಗೆ ಪಾಲು ಇಳಿಕೆ ಮಾಡಿದ್ದಾರೆ. ಮಾನದಂಡಗಳ ಪ್ರಕಾರ ಅನುದಾನ ನೀಡಿಲ್ಲ. ಬಡ ರಾಜ್ಯಗಳಿಗೆ ಕೊಡುವುದಕ್ಕೆ ತಕರಾರಿಲ್ಲ. ಆದರೆ, ಉತ್ತರದ ರಾಜ್ಯಗಳಿಗೆ, ವಿಶೇಷವಾಗಿ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುವ ನಮಗೆ ಅನ್ಯಾಯ ಮಾಡಲಾಗಿದೆ. ‘ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ಯಬಾರದು. ಚಿನ್ನದ ಮೊಟ್ಟೆ ಇಡುವ ಕೋಳಿ ಕೊಯ್ಯಬಾರದು’ ಎಂದರು.

ತೆರಿಗೆ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಎನ್‌ಡಿಆರ್‌ಎಫ್‌ ಅನುದಾನ ಕೇಳಿದ್ದಕ್ಕೆ ಕೊಟ್ಟಿಲ್ಲ, ಕಾಯುತ್ತಿದ್ದೇವೆ. ಮಹದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಲ್ಲ. ದಕ್ಷಿಣದವರು ಜನಸಂಖ್ಯೆ ನಿಯಂತ್ರಣ ಮಾಡಿದ್ದೇ ಶಾಪವಾಯ್ತಾ? ಎಂದು ಸಿಎಂ ಪ್ರಶ್ನಿಸಿದರು.

ಕರ್ನಾಟಕದಿಂದಲೇ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್ ವಿರುದ್ದ ಹರಿಹಾಯ್ದ ಸಿಎಂ, “ಅಮ್ಮ ನಮ್ಮ ದುಡ್ಡು ಕೊಡಮ್ಮ, ಯಾಕೆ ಸುಳ್ಳು ಹೇಳ್ತೀಯ ತಾಯಿ?” ಎಂದು ಕಾಳೆಲೆದರು.

ನಮ್ಮ ಪಾಲು ಕೇಳಲು ಇಲ್ಲಿಗೆ ಬಂದಿದ್ದೇವೆ : ಡಿಕೆಶಿ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ದೊಡ್ಡ ರಾಜ್ಯ ಕರ್ನಾಟಕ. ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ನಮ್ಮ ಪಾಲು ಕೇಳುತ್ತಿದ್ದೇವೆ. ನಾವೆಲ್ಲರೂ ಇಲ್ಲಿ ಕರ್ನಾಟಕದ ಜನರಿಗಾಗಿ ಹೋರಾಡುತ್ತಿದ್ದೇವೆ ಎಂದು ತೋರಿಸಲು ಬಂದಿದ್ದೇವೆ ಎಂದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’: ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...