Homeಮುಖಪುಟಕೇಂದ್ರದ ವಿರುದ್ದ 'ದೆಹಲಿ ಚಲೋ' : ರಾಜ್ಯ ಸರ್ಕಾರದಿಂದ 'ನನ್ನ ತೆರಿಗೆ ನನ್ನ ಹಕ್ಕು' ಹೋರಾಟ

ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

- Advertisement -
- Advertisement -

ಇದು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ. ಬಿಜೆಪಿ ವಿರುದ್ದ ಪ್ರತಿಭಟನೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ‘ನನ್ನ ತೆರಿಗೆ, ನನ್ನ ಹಕ್ಕು’ ಎಂಬ ಘೋಷ ವಾಕ್ಯದಡಿ ನಡೆದ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಸಿಎಂ ಮಾತನಾಡಿದರು.

ಇದೊಂದು ಐತಿಹಾಸಿಕ ಪ್ರತಿಭಟನೆ. ಕೇಂದ್ರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹೋರಾಡುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯ ವಿರುದ್ದ ಇಲ್ಲ ಎಂದು ಸಿಎಂ ತಿಳಿಸಿದರು.

ಕಾನೂನಾತ್ಮಕವಾಗಿ ಅನುದಾನ ಹಂಚಿಕೆಯಾಗಬೇಕು. ನಮಗೆ ಕೊಡಬೇಕಿದ್ದ ತೆರಿಗೆ ಪಾಲು ಇಳಿಕೆ ಮಾಡಿದ್ದಾರೆ. ಮಾನದಂಡಗಳ ಪ್ರಕಾರ ಅನುದಾನ ನೀಡಿಲ್ಲ. ಬಡ ರಾಜ್ಯಗಳಿಗೆ ಕೊಡುವುದಕ್ಕೆ ತಕರಾರಿಲ್ಲ. ಆದರೆ, ಉತ್ತರದ ರಾಜ್ಯಗಳಿಗೆ, ವಿಶೇಷವಾಗಿ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುವ ನಮಗೆ ಅನ್ಯಾಯ ಮಾಡಲಾಗಿದೆ. ‘ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ಯಬಾರದು. ಚಿನ್ನದ ಮೊಟ್ಟೆ ಇಡುವ ಕೋಳಿ ಕೊಯ್ಯಬಾರದು’ ಎಂದರು.

ತೆರಿಗೆ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಎನ್‌ಡಿಆರ್‌ಎಫ್‌ ಅನುದಾನ ಕೇಳಿದ್ದಕ್ಕೆ ಕೊಟ್ಟಿಲ್ಲ, ಕಾಯುತ್ತಿದ್ದೇವೆ. ಮಹದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಲ್ಲ. ದಕ್ಷಿಣದವರು ಜನಸಂಖ್ಯೆ ನಿಯಂತ್ರಣ ಮಾಡಿದ್ದೇ ಶಾಪವಾಯ್ತಾ? ಎಂದು ಸಿಎಂ ಪ್ರಶ್ನಿಸಿದರು.

ಕರ್ನಾಟಕದಿಂದಲೇ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್ ವಿರುದ್ದ ಹರಿಹಾಯ್ದ ಸಿಎಂ, “ಅಮ್ಮ ನಮ್ಮ ದುಡ್ಡು ಕೊಡಮ್ಮ, ಯಾಕೆ ಸುಳ್ಳು ಹೇಳ್ತೀಯ ತಾಯಿ?” ಎಂದು ಕಾಳೆಲೆದರು.

ನಮ್ಮ ಪಾಲು ಕೇಳಲು ಇಲ್ಲಿಗೆ ಬಂದಿದ್ದೇವೆ : ಡಿಕೆಶಿ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ದೊಡ್ಡ ರಾಜ್ಯ ಕರ್ನಾಟಕ. ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ನಮ್ಮ ಪಾಲು ಕೇಳುತ್ತಿದ್ದೇವೆ. ನಾವೆಲ್ಲರೂ ಇಲ್ಲಿ ಕರ್ನಾಟಕದ ಜನರಿಗಾಗಿ ಹೋರಾಡುತ್ತಿದ್ದೇವೆ ಎಂದು ತೋರಿಸಲು ಬಂದಿದ್ದೇವೆ ಎಂದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’: ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...