Homeಕರ್ನಾಟಕಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

ಕನ್ನಡ ಧ್ವಜಾರೋಹಣವಿಲ್ಲದೇ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

- Advertisement -
- Advertisement -

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕನ್ನಡ ಧ್ವಜಾರೋಹಣ ಮಾಡದೇ ಕನ್ನಡ ರಾಜ್ಯೋತ್ಸವ ಆಚರಿಸಿರುವ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರದ ಚಿತಾವಣೆಯೇ ಕಾರಣವೆಂದು ಆರೋಪಿಸಿ ಹಲವಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಸಿಂಧನೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಶೀಲ್ದಾರ್‌ ಅಧಿಕೃತವಾಗಿ ಸುತ್ತೋಲೆ ಹೊರಡಿಸಿ ನಾಡಧ್ವಜ ಹಾರಿಸಬಾರೆಂದು ತಾಕೀತು ಮಾಡಿದ್ದರು. ಇದರಿಂದ ಗೊಂದಲಕ್ಕೊಳಗಾದ ಹಲವಾರು ಜಿಲ್ಲೆಗಳ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಧ್ವಜಾರೋಹಣ ಮಾಡದೇ ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಿ ಕಾರ್ಯಕ್ರಮ ಮುಗಿಸಿದ್ದಾರೆ.

ತುಮಕೂರು, ಬೀದರ್‌, ಚಿಕ್ಕಮಗಳೂರು, ರಾಯಚೂರು, ಮಂಡ್ಯ, ಹಾಸನ, ಕೊಪ್ಪಳ, ಭಾಗಲಕೋಟೆ, ಶಿವಮೊಗ್ಗ, ಉಡುಪಿ, ಚಿಕ್ಕಬಳ್ಳಾಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಧ್ವಜಾರೋಹಣ ನಡೆದಿಲ್ಲ ಎಂದು ಕೇಳಿಬಂದಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಧ್ವಜಾರೋಹಣ ಮಾಡಿದ್ದಾರೆ. ಆದರೆ ಅವರ ಸಂಪುಟದ ನಾಡದ್ರೋಹಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜಾರೋಹಣ ಮಾಡಿಲ್ಲ. ಏನೇ ಸಮರ್ಥನೆ ನೀಡಿದರೂ ಇದು ಉಂಡ ಎಲೆಗೆ ಉಗಿಯುವ ಹೀನ ಚಾಳಿ. ಯಾವುದೋ ಶಾಗಳ ಪಾದ ತೊಳೆಯುವ ಗುಲಾಮಗಿರಿ. ಈ ಕೊಳಕರ ಕೈಲಿ ಕನ್ನಡ ಧ್ವಜ ಮಲಿನಗೊಂಡಿಲ್ಲ ಎಂದು ಸಮಾಧಾನಪಟ್ಟುಕೊಂಡು, ಮುಂದಿನ ರಾಜ್ಯೋತ್ಸವದೊಳಗೆ ಈ ಹೇಡಿ ಸರ್ಕಾರವನ್ನು ಕಿತ್ತೊಗೆಯಬೇಕಿದೆ” ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂರವರು ಕಿಡಿಕಾರಿದ್ದಾರೆ.

ಸರ್ಕಾರಿ ಕಟ್ಟಡಗಳು ಬಿಜೆಪಿ ಅಥವಾ ಆರ್.ಎಸ್.ಎಸ್ ನವರ ಸ್ವತ್ತಲ್ಲ. ಅದು ಸಾರ್ವಜನಿಕರ ಸ್ವತ್ತು, ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕನ್ನಡ ಬಾವುಟವನ್ನು ನಿಷೇಧಿಸಿದ ಬಿಜೆಪಿ ಪಕ್ಷ ಈ ಮಣ್ಣಿನದಲ್ಲ. ಎಂದು ಎಂ.ಆರ್ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ರಾಜ್ಯೋತ್ಸವದ ದಿನ ರಾಷ್ಟ್ರಧ್ವಜ ಹಾರಿಸಿದ್ರೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವ ನಾಡಧ್ವಜದಿಂದ ಆಚರಿಸುತ್ತೇವೆ.. ಸಿಂಪಲ್.. ದೇಶ ಮೊದಲೋ ರಾಜ್ಯ ಮೊದಲೋ ನೋಡೋಣ” ಎಂದು ಕನ್ನಡಪರ ಹೋರಾಟಗಾರ ಗಣೇಶ್‌ ಕೊಡ್ಲಾಡಿಯವರು ಸವಾಲು ಹಾಕಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಬೇಕು-ಸರ್ಕಾರದ ಆದೇಶ.

ಆಚರಣೆ ಮಾಡುತ್ತಿರುವುದು ಭಾರತದ ರಾಜ್ಯೋತ್ಸವ ಅಲ್ಲ;ಕರ್ನಾಟಕದ ರಾಜ್ಯೋತ್ಸವ-ಶ್ರೀ ಸಾಮಾನ್ಯ ಎಂದು ಓದು ಸಿದ್ದೇಗೌಡ ಎಂಬುವವರು ತಿರುಗೇಟು ನೀಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...