Homeಮುಖಪುಟಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ.

ಕೋರ್ಟ್‌ನಲ್ಲಿ ಸಿಬಿಐ ಪ್ರಕರಣದ ವಿಚಾರಣೆ ಬಾಕಿ ಇದೆ. ಹೀಗಾಗಿ ಕೇವಲ ತನಿಖೆಗೆ ಸಿಬಿಐಗೆ ನೀಡಿರುವ ಅನುಮತಿ ಮಾತ್ರ ಹಿಂಪಡೆಯುವುದಕ್ಕೆ ಸರ್ಕಾರಕ್ಕೆ ಸಾಧ್ಯತೆ ಇದೆ.

”ಕಳೆದ ಸರ್ಕಾರ (ಬಿಜೆಪಿ) ತೆಗೆದುಕೊಂಡ ತಪ್ಪು ನಿರ್ಧಾರವನ್ನು ಸಚಿವ ಸಂಪುಟವು ಬಹಳ ಎಚ್ಚರಿಕೆಯಿಂದ ಪರಿಗಣಿಸಿದೆ. ಕಳೆದ ಸರ್ಕಾರದ ಅಡ್ವೊಕೇಟ್ ಜನರಲ್ ಮತ್ತು ನಮ್ಮ ಅಡ್ವೊಕೇಟ್ ಜನರಲ್ ನೀಡಿದ ಅಭಿಪ್ರಾಯವನ್ನು ನಾವು ಪರಿಗಣಿಸಿದ್ದೇವೆ” ಎಂದು ಸಚಿವ ಹೆಚ್ ಕೆ ಪಾಟೀಲ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

”ಹಿಂದಿನ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬದ್ಧವಾಗಿಲ್ಲ ಎಂಬ ನಿರ್ಧಾರಕ್ಕೆ ಸಚಿವ ಸಂಪುಟ ಬಂದಿದೆ… ಕಳೆದ ಸರ್ಕಾರ ಕೈಗೊಂಡ ನಿರ್ಧಾರ ಕಾನೂನು ಬದ್ಧವಾಗಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ಅವರು ಹೇಳಿದರು.

ಆದಾಯ ಮೀರಿದ ಆಸ್ತಿಗೆ ಸಂಬಂಧಿಸಿದಂತೆ ಇದುವರೆಗೆ 577 ಪ್ರಕರಣಗಳು ದಾಖಲಾಗಿವೆ. ಆದರೆ, ಸದ್ಯಕ್ಕೆ ಒಂದೇ ಒಂದು ಪ್ರಕರಣವನ್ನು ಸಿಬಿಐ ತನಿಖೆ ನಡೆಸಿಲ್ಲ. ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಎದುರಿಸಿದ್ದರು ಆದರೆ ಬಿಜೆಪಿ ಸರ್ಕಾರ ಅವರ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ನಿರ್ಧರಿಸಿತ್ತು ಎಂದು ಶಿವಕುಮಾರ್ ಅವರ ಕಚೇರಿ ತಿಳಿಸಿದೆ.

2018ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ, ಆ ಬಳಿಕ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2019ರಲ್ಲಿ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸಲು ಒಪ್ಪಿಕೊಂಡರು. ಶಿವಕುಮಾರ್ ವಿರುದ್ಧ ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ. ಇದಕ್ಕೂ ಮುನ್ನ ಆದಾಯ ತೆರಿಗೆ ಇಲಾಖೆ ಇವರ ವಿರುದ್ಧ ಶೋಧಕಾರ್ಯ ನಡೆಸಿತ್ತು.

ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಸಿಬಿಐಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ನವೆಂಬರ್ 29ಕ್ಕೆ ಮುಂದೂಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಹೋರಾಟಗಾರ, ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತಾರೆ: ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ 18 ವರ್ಷದ ವಿದ್ಯಾರ್ಥಿನಿಯನ್ನು ಹೊರಗೆ ತಳ್ಳಿದ ಮಾನಸಿಕ ಅಸ್ವಸ್ಥ

ನವಿ ಮುಂಬೈನ ಪನ್ವೇಲ್-ಸಿಎಸ್‌ಎಂಟಿ ಮಾರ್ಗದಲ್ಲಿ ಚಲಿಸುವ ಸ್ಥಳೀಯ ರೈಲಿನಿಂದ 18 ವರ್ಷದ ಬಾಲಕಿಯನ್ನು ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, 'ಮಾನಸಿಕವಾಗಿ ಅಸ್ವಸ್ಥ'...

ಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಸುಮ್ಮನೆ ಯಾರ ವಿರುದ್ದವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ (ಡಿ.22) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,...

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ ಡಿಸೆಂಬರ್...

ವಲಯಾರ್‌ ಗುಂಪು ಹತ್ಯೆ ಪ್ರಕರಣ; ಮೃತನ ಕುಟುಂಬಕ್ಕೆ ‘ನ್ಯಾಯದ ಭರವಸೆ’ ನೀಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪು ಹಲ್ಲೆಯಲ್ಲಿ ಸಾವನ್ನಪ್ಪಿದ ರಾಮ್ ನಾರಾಯಣ್ ಬಾಕೆಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಭರವಸೆ ನೀಡಿದ್ದಾರೆ. ಈ ಘಟನೆಯು ಕೇರಳದಂತಹ ಪ್ರಗತಿಪರ...

ಬ್ಯಾಂಕಾಕ್‌ನಿಂದ ₹20 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಮುಂಬೈ: ಬ್ಯಾಂಕಾಕ್‌ನಿಂದ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಇಬ್ಬರು ವ್ಯಕ್ತಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ,...

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನು ಹತ್ಯೆಗೈದ ಪೋಷಕರು

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬ ಸದಸ್ಯರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಭಾನುವಾರ (ಡಿ.21)...

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...