Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...