Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...