Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...