Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...