Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...